ಮಂಗಳೂರು ನಗರದಲ್ಲಿ ಪಂಪ್ ವೆಲ್ ಮೇಲ್ಸೇತುವೆ ಲೋಕಾರ್ಪಣೆ
ಮಂಗಳೂರು, ಜ 31, ಮಂಗಳೂರು ನಗರದ ದೀರ್ಘಕಾಲದ ಬಾಕಿ ಉಳಿದುಕೊಂಡಿದ್ದ ಪಂಪ್ ವೆಲ್ ಮೇಲ್ಸೇತುವೆ ಯನ್ನು ಜಿಲ್ಲಾಉಸ್ತುವಾರಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಶುಕ್ರವಾರ ಉದ್ಘಾಟಿಸಿದರು. ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಬಹುತೇಕ 10 ವರ್ಷಗಳ ವಿಳಂಬ, ಒಂದರ ನಂತರ ಒಂದರಂತೆ ಹಲವು ಅಂತಿಮ ಗಡುವುಗಳು ಮುಗಿದ ನಂತರ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ- ಕುಂದಾಪುರ ನಡುವಣ ನಾಲ್ಕು ಪಥ ಮಾರ್ಗದ ಭಾಗವಾಗಿ ಪಂಪ್ ವೆಲ್ ಮೇಲ್ಸೇತುವೆ ಕೊನೆಗೆ ಶುಕ್ರವಾರ ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಂಡಿತು. ನಂತೂರು- ಎನ್ ಐ ಟಿ ಕೆ ಸರತ್ಕಲ್ ಮಾರ್ಗ ಹೊರತುಪಡಿಸಿ, ರಾಷ್ಟ್ರೀಯ ಹೆದ್ದಾರಿ 66 ತಲಪಾಡಿ- ಕುಂದಾಪುರ ನಡುವಣ ನಾಲ್ಕುಪಥ ಮಾರ್ಗದ ಕಾಮಗಾರಿ 2010 ಸೆಪ್ಟಂಬರ್ ನಲ್ಲಿ ಆರಂಭಗೊಂಡಿತ್ತು, ಪಂಪ್ ವೆಲ್ (ಮಹಾ ವೀರ ಸರ್ಕಲ್) ಮೇಲ್ಸೇತುವೆ ಈ ಯೋಜನೆಯ ಭಾಗವಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 