ಹುಬ್ಬಳ್ಳಿ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
Pure drinking water unit inaugurated at Hubballi bus stations
ಲೋಕದರ್ಶನ ವರದಿ
ಹುಬ್ಬಳ್ಳಿ 09: ಸಾರ್ವಜನಿಕ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹುಬ್ಬಳ್ಳಿ ನಗರ ಮತ್ತು ಉಪನಗರ ಬಸ್ ನಿಲ್ದಾಣ ಹಾಗೂ ನಗರ ಸಾರಿಗೆ (ಸಿಬಿಟಿ) ಬಸ್ ನಿಲ್ದಾಣದಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ (ಆರ್ಒ) ಘಟಕಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯೂಕೆಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಪ್ರಿಯಾಂಕಾ ಎಂ., ಭಾ.ಆ.ಸೇ., ಉದ್ಘಾಟಿಸಿದರು. ಇನ್ಫೋಸಿಸ್ ಫೌಂಡೇಶನ್ನ ಸಿಎಸ್ಆರ್ ಯೋಜನೆಯಡಿ ಇನ್ಫೋಸಿಸ್ ಲಿಮಿಟೆಡ್, ಹುಬ್ಬಳ್ಳಿ ವತಿಯಿಂದ ಈ ಆರ್ಒ ಘಟಕಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ ಮತ್ತು ಉಪನಗರ ಬಸ್ ನಿಲ್ದಾಣ ಹಾಗೂ ಸಿಬಿಟಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ. ಈ ಸೌಲಭ್ಯದಿಂದ ಪ್ರತಿದಿನ ಸಾವಿರಾರು ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಲಿದೆ.
ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಲಿಮಿಟೆಡ್, ಹುಬ್ಬಳ್ಳಿ ಕೇಂದ್ರದ ಮುಖ್ಯಸ್ಥ ಅಲ್ಲಾಬಕ್ಷ ಅಸಾದುಲ್ಲಾ, ಹಿರಿಯ ತಾಂತ್ರಿಕ ವ್ಯವಸ್ಥಾಪಕ ಶಿವಾನಂದ ಕೂಡ್ಲಮಠ, ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ, ಮುಖ್ಯ ಕಾಮಗಾರಿ ಅಭಿಯಂತರ ದಿವಾಕರ್ ಯರಗೊಪ್ಪ, ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗಬಾನ್, ಹೆಚ್. ರಾಮನಗೌಡರ, ಅಧಿಕಾರಿಗಳಾದ ರವಿ ಅಂಚಿಗಾವಿ, ನವೀನಕುಮಾರ ತಿಪ್ಪಾ, ಸಂಗಮೇಶ ಮಟೋಳಿ ಸೇರಿದಂತೆ ಹು-ಧಾ ನಗರ ಸಾರಿಗೆ ವಿಭಾಗ ಹಾಗೂ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 