ಗುಣಾತ್ಮಕ ಸಂಶೋಧನೆ - ಅಂತರಾಷ್ರೀಯ ಕಾರ್ಯಾಗಾರ
ಲೋಕದರ್ಶನ ವರದಿ
ಬೆಳಗಾವಿ ೦೬: ಕೆಎಲ್ಇ ವಿಶ್ವವಿದ್ಯಾಲಯದ ಶುಶ್ರೂಷಾ ವಿಜ್ಞಾನ ಮಹಾವಿದ್ಯಾಲಯ, ಮಾನಸಿಕ ರೋಗ ವಿಭಾಗ ಬೆಳಗಾವಿ ಹಾಗು ಫಿಲಡೆಲ್ಫಿಯಾದ ಥಾಮಸ್ ಜೆಫರರ್ಸನ್ ವಿಶ್ವವಿದ್ಯಾಲಯದ ಶುಶ್ರೂಷಾ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ದಿ. 6ರಂದು ಕೆಎಲ್ಇ ಶತಮಾನೋತ್ಸವ ಸಭಾಂಗಣದಲ್ಲಿ ಗುಣಾತ್ಮಕ ಸಂಶೋಧನೆ ಸಂದರ್ಶನಕ್ಕಾಗಿ ಸುಧಾರಿತ ಪ್ರಶ್ನೆಗಳು ಮತ್ತು ಸಂದರ್ಶನ ಕಲೆ ಕುರಿತಾದ ಅಂತರಾಷ್ರೀಯ ಕಾಯರ್ಾಗಾರ ನೆರವೇರಿತು.
ಕಾರ್ಯಕ್ರಮದ ಆರಂಭದಲ್ಲಿ ಕಾಹೆರ್ ಶುಶ್ರೂಷಾ ವಿಜ್ಞಾನ ಮಹಾವಿದ್ಯಾಲಯದ ಡೀನ್ ಮತ್ತು ಪ್ರಾಚಾರ್ಯರಾಗಿರುವ ಡಾ ಸುಧಾ ರಡ್ಡಿ ಸರ್ವರಿಗೆ ಸ್ವಾಗತ ಕೋರಿದರು. ಡಾ.ಪೆಟ್ರéೀಷಿಯಾ ಕೆಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಫಿಲಡೆಲ್ಫಿಯಾದ ಥಾಮಸ್ ಜೆಫರರ್ಸನ್ ವಿಶ್ವವಿದ್ಯಾಲಯದ ಶುಶ್ರೂಷಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಯಾಮಿ ಡಿಸೋಜಾ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು.ಕಾಯರ್ಾಗಾರದಲ್ಲಿ ಸಂದರ್ಶನಕ್ಕಾಗಿ ಸುಧಾರಿತ ರೀತಿಯಲ್ಲಿ ಪ್ರಶ್ನೆಗಳನ್ನು ಸಿದ್ಧಪಡಿಸುವದು ಮತ್ತು ಸಂದರ್ಶನ ಕಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಶೋಧನಾತ್ಮಕವಾಗಿ ಚಚರ್ೆ ಮತ್ತು ಮಾರ್ಗದರ್ಶನ ನೀಡಲಾಯಿತು . ಶುಶ್ರೂಷಾ ವಿಜ್ಞಾನ ಮಹಾವಿದ್ಯಾಲಯ ,ಮಾನಸಿಕ ರೋಗ ವಿಭಾಗದ ಮುಖ್ಯಸ್ಥರಾಗಿರುವ ಡಾ.ಗುರುರಾಜ ಉಡುಪಿ ವಂದನಾರ್ಪಣೆ ಮಾಡಿದರು.ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಅಂತರಾಷ್ರೀಯ ಕಾಯರ್ಾಗಾರದಲ್ಲಿ ಪಾಲ್ಗೊಂಡರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 