ರಸಪ್ರಶ್ನೆ ಸ್ಫರ್ಧೆ: ವಿಶ್ರೀಕೃ ವಿವಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Quiz Competition: Prize distribution to students of Vishrikri University
ಬಳ್ಳಾರಿ 16: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ರೀಕೃವಿವಿಯ ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರವು ಇತ್ತೀಚೆಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ನಗರದ ಮುನಿಸಿಪಲ್ ಮೈದಾನದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ ಜಯಂತಿಯಂದು ಕಾರ್ಯಕ್ರಮದಲ್ಲಿ ಶಾಸಕರಾದ ನಾರಾ ಭರತ್ರೆಡ್ಡಿ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಿದರು.ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ವಿವಿಯ ವಿದ್ಯಾರ್ಥಿಗಳಾದ ಚರಣ್ ನಜರೆತ್, ಬಸವರಾಜ್ ಮತ್ತು ಕಾರ್ತಿಕ್ ಕೆ.ಬಿ. (ರಾಜ್ಯಶಾಸ್ತ್ರ) ಹಾಗೂ ಅನುಶ್ರೀ ಮತ್ತು ವಿಜಯಲಕ್ಷ್ಮಿ (ವಾಣಿಜ್ಯಶಾಸ್ತ್ರ) ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಕ್ಕಾಗಿ ಗೌರವಿಸಲಾಯಿತು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ 