ಮುಸ್ಲಿಮರ ಸಮಾಧಿಗಳ ಮೇಲೆ ರಾಮ ದೇಗಲವೇ..? ಆಯೋಧ್ಯೆ ಸ್ಥಳೀಯ ಮುಸ್ಲಿಮರ ಹೊಸ ವರೆಸೆ
ಅಯೋಧ್ಯ, ಫೆ ೧೮, ರಾಮಮಂದಿರ ನಿರ್ಮಿಸಲು ಹಂಚಿಕೆ ಮಾಡಿರುವ ಭೂಮಿಯಲ್ಲಿ ಗೋರಿಗಳಿವೆ ಎಂದು ಕೆಲ ಅಯೋಧ್ಯ ಮುಸ್ಲಿಮರು ದೇಗುಲ ನಿರ್ಮಾಣ ಸಂಬಂಧ ರಚಿಸಲಾಗಿರುವ ಟ್ರಸ್ಟ್ಗೆ ಪತ್ರ ಬರೆದಿದ್ದಾರೆ.ಗೋರಿಗಳ ಮೇಲೆ ದೇವಾಲಯ ನಿರ್ಮಿಸಿದರೆ “ಸನಾತನ ಧರ್ಮ” ಉಲ್ಲಂಘನೆಯಾಗುವುದಿಲ್ಲವೇ..? ಮುಸ್ಲಿಮರ ಸಮಾಧಿಗಳ ಮೇಲೆ ಹೇಗೆ ರಾಮಮಂದಿರ ನಿರ್ಮಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮುಸ್ಲಿಮರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಂ ಆರ್ ಶಂಷದ್ ದೇವಾಲಯ ಟ್ರಸ್ಟ್ ನಾಯಕತ್ವ ವಹಿಸಿರುವ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕೆ.ಕೆ. ಪರಾಶರನ್ ಅವರಿಗೆ ಈ ಪತ್ರ ರವಾನಿಸಿದ್ದಾರೆ.
ಬಾಬ್ರಿ ಮಸೀದಿ ನೆಲಸಮವಾದ ಸ್ಥಳದ ಸುತ್ತ ಸ್ಮಶಾನವಿದೆ ... ೧೮೮೫ ರ ಗಲಭೆಯಲ್ಲಿ ಮೃತಪಟ್ಟ ೭೫ ಮುಸ್ಲಿಮರನ್ನು ಅಲ್ಲಿಯೇ ಸಮಾಧಿ ಮಾಡಲಾಗಿದೆ ಎಂದು ಪತ್ರದಲ್ಲಿ ವಿವರಿ ಸಲಾಗಿದೆ.ದಾಖಲೆಗಳ ಪ್ರಕಾರ ... ಮೃತ ಮುಸ್ಲಿಮರ ಎಲ್ಲಾ ಗೋರಿಗಳು ಈಗಿನ ಮಸೀದಿಯ ಸುತ್ತಮುತ್ತಲ ಪ್ರದೇಶಗಳಲ್ಲಿವೆ. ಈ ಸ್ಥಳವನ್ನು ಸಮಾಧಿಗಾಗಿ ಬಳಸಲಾಗುತ್ತಿತ್ತು ಎಂದು ಸ್ಥಳೀಯ ಮುಸ್ಲಿಮರು ಹೇಳುತ್ತಿದ್ದಾರೆ. ಮುಸ್ಲಿಮರ ಸಮಾಧಿಯ ಮೇಲೆ ರಾಮ ಮಂದಿರ ನಿರ್ಮಿಸುವುದು ಸ್ವೀಕಾರಾರ್ಹವೇ ಎಂದು ಪರಿಗಣಿಸುವಂತೆ ಪತ್ರದಲ್ಲಿ ಕೋರಲಾಗಿದೆ. ೬೭ ಎಕರೆಗಳ ಭೂಮಿ ವಿಷಯದಲ್ಲಿ ಸರ್ಕಾರ ಮುಸ್ಲಿಮರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಕೀಲ ಶಂಷದ್ ಆರೋಪಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 