ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್ಬಿ.ಐ
ಮುಂಬೈ, ಅ 15: ಅಕ್ರಮ ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿ. (ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಲ್ಪ ಪ್ರಮಾಣದಲ್ಲಿ ನಿರ್ಬಂಧ ಸಡಲಿಸಿದೆ.
ಆರ್ಬಿ.ಐ ಈ ಕುರಿತು ಪ್ರಕಟಣೆ ನೀಡಿದ್ದು, ಪಿಎಂಸಿ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರು ತಮ್ಮ ಖಾತೆಯಿಂದ 40 ಸಾವಿರ ರೂಪಾಯಿವರೆಗೂ ಹಣ ಹಿಂತೆಗೆಯಬಹುದು ಎಂದು ಆರ್ಬಿಐ ತಿಳಿಸಿದೆ.
ಈ ಮೊದಲು 25 ಸಾವಿರ ರೂಪಾಯಿ ಹಿಂಪಡೆಯಲು ಮಾತ್ರ ಅನುಮತಿ ಇತ್ತು. ಕಳೆದ ತಿಂಗಳು ಈ ಬ್ಯಾಂಕ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಿದ ನಂತರ ಆರ್ಬಿಐ ವಿತ್ ಡ್ರಾ ಮಿತಿಯನ್ನು ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.
ಬ್ಯಾಂಕಿನ ಹಣಕಾಸು ಪರಿಸ್ಥಿತಿಯನ್ನು ಮತ್ತು ತನ್ನ ಠೇವಣಿದಾರರಿಗೆ ಹಣ ಪಾವತಿ ಮಾಡುವ ಸಾಮಥ್ರ್ಯವನ್ನು ಪರಿಶೀಲಿಸಿದ ನಂತರ ವಿತ್ ಡ್ರಾ ಮಿತಿಯನ್ನು ಹೆಚ್ಚಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 