ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ನಾಲ್ವರ ವಿರುದ್ದ ಪ್ರಕರಣ ದಾಖಲುಬಂಟ್ವಾಳ,
ದಕ್ಷಿಣ ಕನ್ನಡ, ಡಿ 17: ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ದ್ವಂಸಗೊಳಿಸಿದ ದೃಶ್ಯಗಳನ್ನು ಮರು ಸೃಷ್ಟಿಸಿ ರೂಪಕ ಪ್ರದರ್ಶನ ಸಂಬಂಧ ಕಲ್ಲಡ್ಕದ ಶ್ರೀ ರಾಮ ವಿದ್ಯಾನಿಕೇತನ ಶಾಲಾ ಆಡಳಿತ ಮಂಡಳಿಯ ನಾಲ್ವರು ಸದಸ್ಯರ ವಿರುದ್ದ ಬಂಟ್ವಾಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.ಶಾಲೆ ನಡೆಸುತ್ತಿರುವ ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ನಾರಾಯಣ ಸೋಮಾಯಾಜಿ, ವಸಂತ ಮಹದೇವ್ ಹಾಗೂ ಚಿನ್ನಪ್ಪ ಕೋಟಿಯಾನ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ- ಪಿ ಎಫ್ ಐ ಸ್ಥಳೀಯ ಕಾರ್ಯಕರ್ತ ಅಬೂಬ್ಕರ್ ಸಿದ್ಧಿಖ್ ಸಲ್ಲಿಸಿರುವ ದೂರಿನ ಹಿನ್ನಲೆಯಲ್ಲಿ ಪೊಲೀಸರು, ಶಾಲಾ ಆಡಳಿತ ಮಂಡಳಿ ಸದಸ್ಯರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಬಂಟ್ವಾಳದ ಕಲ್ಲಡ್ಕದ ಶ್ರೀ ರಾಮ ವಿದ್ಯಾನಿಕೇತನ ಹೈಸ್ಕೂಲ್ ವಿದ್ಯಾರ್ಥಿಗಳು ಭಾನುವಾರ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆ ಉಲ್ಲಂಘಿಸಿ ಬಾಬ್ರಿ ಮಸೀದಿ ದ್ವಂಸಗೊಳಿಸಿದ್ದ ಸನ್ನಿವೇಶಗಳನ್ನು ಮರು ಸೃಷ್ಟಿಸಿ ರೂಪಕ ಪ್ರದರ್ಶಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 