ರಸ್ತೆಗಳ ದುರಸ್ತಿಗೆ ಹಣ ಬಿಡುಗಡೆ ಮಾಡಲು ರಾಹುಲ್ ಗಾಂಧಿಯಿಂದ ಗಡ್ಕರಿಗೆ ಪತ್ರ
ವಯನಾಡ್, ಆಗಸ್ಟ್ 27 ಮಳೆಯಿಂದಾಗಿ ಕೇರಳದ ಮೂರು ಜಿಲ್ಲೆಗಳಲ್ಲಿ ಹಾನಿಗೊಳಗಾದ ರಸ್ತೆಗಳ ದುರಸ್ತಿ ಮತ್ತು ಪುನರ್ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ವಯನಾಡ್ ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ವಯನಾಡ್, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಸೇರಿ ಮೂರು ಜಿಲ್ಲೆಗಳಲ್ಲಿ ಹರಡಿರುವ ತಮ್ಮ ಲೋಕಸಭಾ ಕ್ಷೇತ್ರ ವಯನಾಡ್, ಆಗಸ್ಟ್ 8ರ ಮಳೆ ಮತ್ತು ಪ್ರವಾಹದಿಂದ ಅತಿ ಹೆಚ್ಚು ಹಾನಿಗೊಳಗಾಗಿದೆ ಎಂದು ಸೋಮವಾರ ಗಡ್ಕರಿಗೆ ಬರೆದ ಪತ್ರದಲ್ಲಿ ರಾಹುಲ್ ತಿಳಿಸಿದ್ದಾರೆ. ಕ್ಷೇತ್ರದ ಪ್ರವಾಹಪೀಡಿತ ಪ್ರದೇಶಗಳಲ್ಲಿನ ಹೆಚ್ಚಿನ ರಸ್ತೆಗಳು ಮತ್ತು ಇತರ ಸಂಪರ್ಕಗಳು ಹಾನಿಗೀಡಾಗಿವೆ ಅಥವಾ ಕೊಚ್ಚಿ ಹೋಗಿವೆ ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಪ್ರವಾಹ ಪೀಡಿತ ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮಂಗಳವಾರ ರಾಹುಲ್ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 