ಮೀರತ್ ಗೆ ತೆರಳದಂತೆ ರಾಹುಲ್, ಪ್ರಿಯಾಂಕಾರನ್ನು ತಡೆದ ಪೊಲೀಸರು
ನವದೆಹಲಿ, ಡಿ.24,ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರಪತಿ ಮಹಾತ್ಮ ಗಾಂಧಿಯವರ ಸಮಾಧಿ ರಾಜ್ಘಾಟ್ನಲ್ಲಿ ನಡೆದ 'ಸತ್ಯಾಗ್ರಹ'ದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ಮೀರತ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರತಿಭಟನೆಯ ವೇಳೆ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಹೋದಾಗ ಪೊಲೀಸರು ಅವರನ್ನು ತಡೆದರು.ಕಳೆದ ವಾರ ನಡೆದ ಹಿಂಸಾಚಾರದ ವೇಳೆ ಆರು ಜನರು ಸಾವನ್ನಪ್ಪಿದ್ದರು. ಘಟನೆ ಕುರಿತು ಖಂಡನೆ ವ್ಯಕ್ತವಾಗಿದ್ದು, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ರಾಹುಲ್, ಪ್ರಿಯಾಂಕಾ ಇಂದು ಮೀರತ್ಗೆ ಪ್ರಯಾಣ ಬೆಳಸಿದ್ದರು.ಮಂಗಳವಾರ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಬಂದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಅವರು ಒಂದೇ ಕಾರಿನಲ್ಲಿ ಮೀರತ್ಗೆ ಹೋಗುತ್ತಿದ್ದರು. ಆದರೆ ಪೊಲೀಸರು ಮೀರತ್ ಗೂ ಮುನ್ನ ಪರತಾಪುರದಲ್ಲಿ ಅವರನ್ನು ತಡೆದರು.ಪೊಲೀಸರು ತಡೆದಿದ್ದನ್ನು ಗಾಂಧಿ ಹಾಗೂ ಪ್ರಿಯಾಂಕಾ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪೊಲೀಸ್ ಅಧಿಕಾರಿಗಳು ನಗರದ ಅನೇಕ ಸ್ಥಳಗಳಲ್ಲಿ 144 ಕಲಂ ಜಾರಿ ಇದೆ ಎಂದು ಹೇಳಿದರು.ಕೇವಲ ಮೂರು ಜನರು ಮಾತ್ರ ಹೋಗುತ್ತಿದ್ದಾಗಲೂ, ತಮಗೆ ಹೋಗಲು ಅವಕಾಶ ನೀಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 