ರಾಹುಲ್ ಅಲ್ಪಾವಧಿಯ ಪರಿಹಾರವಷ್ಟೇ ಎಂದ ಪಾರ್ಥಿವ್
ನವದೆಹಲಿ, ಮೇ 20,ಟೀಮ್ ಇಂಡಿಯಾ ಪರ ಟೆಸ್ಟ್ ಪಂದ್ಯ ಆಡಿದ ಅತಿ ಕಿರಿಯ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮನ್ ಎನಿಸಿರುವ ಪಾರ್ಥಿವ್ ಪಟೇಲ್, ಸೀಮಿತ ಓವರ್ ಗಳಲ್ಲಿ ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ನಡುವಿನ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ತಮ್ಮಲ್ಲಿದ್ದ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.ಇತ್ತೀಚಿನ ಸಂಚಿಕೆ ' ಲಾಕ್ ಡೌನ್ ಬಟ್ ನಾಟ್ ಔಟ್ ' ಸರಣಿಯಲ್ಲಿ ಮಾತನಾಡಿರುವ 2002ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಪಾರ್ಥಿವ್ ಪಟೇಲ್, ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಭಾರತ ತಂಡದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲು ಮೊದಲ ಆಯ್ಕೆಯ ಕುರಿತು ಪ್ರಶ್ನಿಸಿದಾಗ ತಮ್ಮ ಮನಸ್ಸಿನ ಅಂತಃರಾಳವನ್ನು ಬಹಿರಂಗಪಡಿಸಿದ್ದಾರೆ.
'' ಪ್ರಸ್ತುತ ಸಮಯದಲ್ಲಿ ಕೆ.ಎಲ್. ರಾಹುಲ್ ಅಲ್ಪಾವಧಿ ಪರಿಹಾರ. ನೀವು ವಿಶ್ವಕಪ್ ಬಗ್ಗೆ ಯೋಚಿಸುತ್ತಿದ್ದರೆ ರಾಹುಲ್ ನಿಮ್ಮ ತಾತ್ಕಾಲಿಕ ಪರಿಹಾರವಷ್ಟೇ ಎಂದು ನಾನು ಭಾವಿಸುತ್ತೇನೆ. ವಿಶ್ವಕಪ್ ಸಮಯದಲ್ಲಿ ರಾಹುಲ್ ಭಾರತದ ಪರ ಕೀಪಿಂಗ್ ಹೊಣೆಗಾರಿಕೆಯನ್ನು ಉತ್ತಮವಾಗಿ ನಿರ್ವಹಿಸಬಲ್ಲರು, ಇದರಲ್ಲಿ ಯಾವುದೇ ಸಂದೇಹವಿಲ್ಲ, '' ಎಂದು ಪಾರ್ಥಿವ್ ಹೇಳಿದ್ದಾರೆ.'' ಆದರೆ ರಿಷಭ್ ಪಂತ್ ಅವರಲ್ಲಿ ನಿಜವಾಗಿಯೂ ಕೀಪಿಂಗ್ ಸಾಮರ್ಥ್ಯವಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾನು ರಿಷಭ್ ನನ್ನು ಭೇಟಿಯಾದಾಗಲೆಲ್ಲಾ ಇದನ್ನೇ ಹೇಳಿದ್ದೇನೆ. ನಿಮ್ಮಲ್ಲಿ ಪ್ರತಿಭೆ ಇರುವ ಕಾರಣಕ್ಕಾಗಿಯೇ ಜನರು ಮಾತನಾಡುತ್ತಿದ್ದಾರೆ. ನಿಮ್ಮಲ್ಲಿ ಯಾವುದೇ ಪ್ರತಿಭೆ ಇಲ್ಲದಿದ್ದರೆ ಮತ್ತು ನೀವು ಪ್ರತಿಭಾವಂತರಾಗಿರದಿದ್ದರೆ ಜನರು ನಿಮ್ಮ ಬಗ್ಗೆ ಮಾತನಾಡುತ್ತಿರಲಿಲ್ಲ. ಆದ್ದರಿಂದ ಅದನ್ನು ನೆನಪಿನಲ್ಲಿಡಿ. ಕಳೆದು ಹೋದ ಲಯವನ್ನು ಮರಳಿ ಪಡೆಯಬೇಕಾದರೆ ನೀವು ದೇಶೀಯ ಕ್ರಿಕೆಟ್ಗೆ ಹಿಂತಿರುಗಬೇಕು ಮತ್ತು ಆ ಲಯವನ್ನು ಮರಳಿ ಪಡೆಯಬೇಕು. ನಿನ್ನ ಜಾಗದಲ್ಲಿ ನಾನಿದ್ದರೂ ಒಂದೆರೆಡು ವರ್ಷ ದೇಶಿಯ ಕ್ರಿಕೆಟ್ ಆಡಿ ಫಾರ್ಮ ಕಂಡುಕೊಳ್ಳುತ್ತಿದ್ದೆ ಎಂದು ತಿಳಿ ಹೇಳಿದ್ದೇನೆ, "ಎಂದು ಅವರು ವಿವರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 