ರಾಹುಲ್ ತಮ್ಮ ಹೊಸ ತಂಡದಿಂದ ಪ್ರೀತಿ ಮತ್ತು ಗೌರವ ವನ್ನು ಬಯಸುತ್ತಿದ್ದಾರೆ: ಪಾರ್ಥ್ ಜಿಂದಾಲ್
ಪಾರ್ಥ್ ಜಿಂದಾಲ್ ಮತ್ತು ಕೆಎಲ್ ರಾಹುಲ್
ಹೊಸದಿಲ್ಲಿ 28: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಅವರು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಲಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು 14 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಡೆದುಕೊಂಡಿದೆ.
ಮೂರು ವರ್ಷಗಳ ನಂತರ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಬೇರ್ಪಟ್ಟಿದ್ದಾರೆ. ಅದರ ನಂತರ ಎಲ್ಎಸ್ಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು ವೈಯಕ್ತಿಕ ಗುರಿಗಳಿಗಿಂತ ತಂಡಕ್ಕೆ ಆದ್ಯತೆ ನೀಡುವ ಆಟಗಾರರನ್ನು ಮಾತ್ರ ಉಳಿಸಿಕೊಂಡಿದ್ದೇವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದೀಗ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ-ಮಾಲೀಕ ಪಾರ್ಥ್ ಜಿಂದಾಲ್ ಅವರು ರಾಹುಲ್ ತಮ್ಮ ಹೊಸ ತಂಡದಿಂದ “ಪ್ರೀತಿ ಮತ್ತು ಗೌರವ” ವನ್ನು ಬಯಸುತ್ತಾರೆ ಎಂದು ಬಹಿರಂಗಪಡಿಸಿದ್ದಾರೆ.
ರಾಹುಲ್ ಅವರು ನಾನು ಕ್ರಿಕೆಟ್ ಆಡಲು ಬಯಸುತ್ತೇನೆ. ನಾನು ಫ್ರಾಂಚೈಸಿಯಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯಲು ಬಯಸುತ್ತೇನೆ. ನಾನು ಗೌರವವನ್ನು ಪಡೆಯಲು ಬಯಸುತ್ತೇನೆ ಮತ್ತು ನಾನು ನಿಮ್ಮಿಂದ ಅದನ್ನು ಪಡೆಯುತ್ತೇನೆ ಎಂದು ತಿಳಿದಿದ್ದೇನೆ. ನಾನು ಸ್ನೇಹಿತರಿಗಾಗಿ ಆಡಲು ಮತ್ತು ಡಿಸಿ ತಂಡವನ್ನು ಗೆಲ್ಲುವಂತೆ ಮಾಡಲು ಹೆಚ್ಚು ಉತ್ಸುಕನಾಗಿದ್ದೇನೆ. ನಾನು ಎಂದಿಗೂ ಐಪಿಎಲ್ ಕಪ್ ಗೆದ್ದಿಲ್ಲ. ದೆಹಲಿಯೂ ಯಾವತ್ತೂ ಐಪಿಎಲ್ ಕಪ್ ಗೆದ್ದಿಲ್ಲ. ಇದನ್ನು ಒಟ್ಟಿಗೆ ಮಾಡೋಣ ಎಂದು ಹೇಳಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಪಾರ್ಥ್ ಜಿಂದಾಲ್ ಹೇಳಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 