ಮಳೆ ಹಾನಿ: ವಿವಿಧ ಗ್ರಾಮಗಳಿಗೆ ಭೀಮಾಶಂಕರ ಕನ್ನೂರ ಭೇಟಿ
Rain damage: Bhimashankar Kannur visits various villages
ಇಂಡಿ 19: ತಾಲೂಕಿನಾದ್ಯಂತ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ಇದ್ದಾರೆ ರೈತರು. ಜಿಟಿ ಜಿಟಿ ಮಳೆಯಿಂದಾಗಿ ಕೆಲವು ಗ್ರಾಮಗಳಲ್ಲಿ ಮನೆಗಳು ಬಿದ್ದು ಹಾನಿಯಾಗಿವೆ. ಈ ಸುದ್ದಿ ತಿಳಿದ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡ ಮನೆಗಳ ವೀಕ್ಷಣೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ಹಾನಿಗೊಂಡ ಮನೆಗಳಿಗೆ ಬೇಟಿ ನೀಡಿದರು.
ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು. ಬಳ್ಳೊಳ್ಳಿ ಉಪ ತಹಶೀಲ್ದಾರ ಎ ಎಸ್ ಗೋಟ್ಯಾಲ, ಹಡಲಸಂಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿಗಳು ಪ್ರವೀಣ ಲಮಾಣಿ, ಬಳ್ಳೊಳ್ಳಿ ಕಂದಾಯ ನೀರೀಕ್ಷಕ ಬಿ ಜಿ ಕೊಡವನ್ನ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 