ಗೋವಾದಲ್ಲಿ ಬಿಡುವು ಕೊಟ್ಟ ಮಳೆ : ಜನರು ಕೊಂಚ ನಿರಾಳ
ಪಣಜಿ, ಆ 10 ಗೋವಾದಲ್ಲಿ ಸತತ ಐದು ದಿನಗಳ ಕಾಲ ಎಡಬಿಡದೆ ಸುರಿದ ಭಾರೀ ಮಳೆ ಶನಿವಾರ ವಿರಾಮ ನೀಡಿದ್ದು ಜನರು ಸ್ವಲ್ಪ ನಿರಾಳರಾಗಿದ್ದಾರೆ.
ರಾಜ್ಯದ ಕೆಲವು ಕಡೆ ಭಾರೀ ಮಳೆ ಬಿದ್ದಿದ್ದು ಉತ್ತರ ಗೋವಾದಲ್ಲಿ ಸಟ್ಟಾರಿಯಲ್ಲಿ ಬಿರುಗಾಳಿ ಸಹಿತ ಮಳೆ ಬಿದ್ದಿದೆ. ಭಾರೀ ಮಳೆಯಿಂದಾಗಿ ವಿದ್ಯುತ್, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಇನ್ನೆರಡು ದಿನಗಳಲ್ಲಿ ರಸ್ತೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ಎಂದಿನಂತಿರಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ಭರವಸೆ ನೀಡಿದ್ದರು.
ಭಾರೀ ಮಳೆಯಿಂದಾಗಿ ದೈನಂದಿನ ಅಗತ್ಯಗಳಾದ ಹಾಲು, ಹಣ್ಣು, ತರಕಾರಿಗಳ ಲಭ್ಯತೆಗೆ ಅಡಚಣೆಯಾಗಿದೆ. ಕೆಲವೆಡೆ ದುಬಾರಿ ಬೆಲೆಯಿದ್ದು ಜನರು ಪರದಾಡುವಂತಾಗಿದೆ.
ಈ ಮಧ್ಯೆ ಉತ್ತರ ಮತ್ತು ದಕ್ಷಿಣ ಗೋವಾದ ಕೆಲವೆಡೆ ಶನಿವಾರ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 