ಮುಂದಿನ ಮೂರು ದಿನ ಬೆಂಗಳೂರಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮೇ 25, ಮುಂದಿನ ಮೂರುದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆಯಿಂದಿರುವಂತೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ಮುನ್ಸೂಚನೆ ನೀಡಿದ್ದಾರೆ.ಅರಬ್ಬೀ ಸಮುದ್ರ, ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ ಎಂದಿದ್ದಾರೆ. ಕಳೆದೊಂದು ದಿನದಿಂದ ರಾಜಧಾನಿಯಲ್ಲಿ ಮಳೆ ಆಗುತ್ತಿದೆ. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಸುರಿದ ಪರಿಣಾಮ ಹಲವೆಡೆ ಮರಗಳು ಧರೆಗುಳಿದಿದ್ದವು. ಲಾಕ್ಡೌನ್ ಕರ್ಪ್ಯೂ ಇದ್ದ ಪರಿಣಾಮ ಜನಸಂಚಾರ ವಾಹನ ಸಂಚಾರವಿಲ್ಲದೇ ಯಾವುದೇ ದುರ್ಘಟನೆ, ಅನಾಹುತ ಸಂಭವಿಸಿರಲಿಲ್ಲ.ಆದರೆ ಬುಧವಾರದಿಂದ ಮಳೆ ಹೆಚ್ಚಾಗಿ ಅಬ್ಬರಿಸುವ ಸಾಧ್ಯತೆಯಿದೆ. ಮೂರು ದಿನ ಸಂಜೆ ಹೊತ್ತಿಗೆ ಮಳೆಸುರಿಯುವುದರಿಂದ ಕಚೇರಿಯಿಂದ ಹೊರಬರುವ ಸಮಯವಿದಾಗಿದ್ದು, ಮರ ಬೀಳುವ ವಿದ್ಯುತ್ ಕಂಬ ಬೀಳುವ ಸಂಭವವಿದೆ. ಚರಂಡಿ, ರಸ್ತೆ ಗುಂಡಿಯಿಂದ ರಕ್ಷಿಸಿಕೊಳ್ಳುವಂತೆ ಮಳೆಯಲ್ಲಿ ಓಡಾಡದಂತೆ ಎಚ್ಚರಿಕೆಯಿಂದಿರಲು ಹೇಳಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 