ಬೆಂಗಳೂರಿನಲ್ಲಿ ಗುರುವಾರ ಸಹ ಮಳೆ ಅಬ್ಬರ, ಬೇಗ ಮನೆ ಸೇರಿಕೊಳ್ಳಿ..!
ಬೆಂಗಳೂರು, ಅ 3 ಮುಂಗಾರು ಅವಧಿ ಅಧಿಕೃತವಾಗಿ ಅಂತ್ಯವಾಗಿದ್ದರೂ ಮಳೆಯ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ; ಇಂದೂ ಸಹ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಜನರು ಸಂಜೆ ಕಚೇರಿಯಿಂದ ಬೇಗ ಮನೆ ಸೇರಿಕೊಳ್ಳುವುದು, ಪರ್ಯಾಯ ವ್ಯವಸ್ಥೆಮಾಡಿಕೊಳ್ಳುವುದು ಉತ್ತಮ. ಸಂಜೆ ಕಚೇರಿಯಿಂದ ಬೇಗ ಮನೆ ತಲುಪಬೇಕು ಇ್ಲಲವಾದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಬುಧವಾರ ನಗರದಲ್ಲಿ ಗುಡುಗು ಮಿಂಚು ಸಹಿತ ಸುರಿದ ಮಳೆಯಿಂದ ಚರಂಡಿಗಳು ತುಂಬಿ ಹರಿದ ಪರಿಣಾಮ ರಸ್ತೆಯ ಮೇಲೆ ನೀರು ನಿಂತು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆ ನಿಂತರೂ ಬೈಕ್ ಸವಾರರು ತಮ್ಮ ತಮ್ಮ ಸ್ಥಳ ತಲುಪಲು ಹರಸಾಹಸ ಮಾಡಿದ್ದರು. ಅದೇ ರೀತಿ ಗುರುವಾರ ಕೂಡ ಮಳೆ ಆಗಲಿದೆ ಎಂದು ವರದಿ ಹೇಳಿದೆ ಇಂದು ಸಂಜೆ ವೇಳೆಗೆ ವರುಣನ ಆರ್ಭಟ ಮತ್ತೆ ಆರಂಭವಾಗಲಿದೆ. ಮಳೆಯ ಜೊತೆ ಗುಡುಗು-ಮಿಂಚು ಕೂಡ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಸಂಜೆ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ವೃತ್ತ, ಸಂಜಯ್ ನಗರ, ಹೆಬ್ಬಾಳ, ಶಾಂತಿನಗರ, ಯಶವಂತಪುರ, ಕೋರಮಂಗಲ, ಶ್ರೀನಿವಾಸ ನಗರ, ಗಿರಿನಗರ ಸೇರಿ ಹಲವು ಸ್ಥಳಗಳಲ್ಲಿ ಮಳೆಯಿಂದ ಟ್ರಾಫಿಕ್ ಸಮಸ್ಯೆಯಾಗಿ ಜನರು ಮನೆ ತಲುಪಲು ಹೈರಾಣರಾಗಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 