ಅಧಿವೇಶನದಲ್ಲಿ ಆಕ್ರೋಶಗೊಂಡ ರಾಜು ಕಾಗೆ..!
ಅಧಿಕಾರಿಯ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕೈ ಶಾಸಕ..!
ಬಿಜೆಪಿ ಶಾಸಕರ ಸಾಥ್..!!
ಕಾಗವಾಡ 18: ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಿಯಾರ ತಮ್ಮನ್ನು ಅವಮಾನಿಸಿದ್ದಾರೆಂದು ಕಾಗವಾಡ ಶಾಸಕ ರಾಜು ಕಾಗೆ ಆರೋಪಿಸಿ, ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದ್ದರು.
ಮಂಗಳವಾರ ದಿ. 18 ರಂದು ಅಧಿವೇಶನದಲ್ಲಿ ಮಾತನಾಡಿದ ಶಾಸಕ ರಾಜು ಕಾಗೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಿಯಾರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಾರ್ಜಜನಿಕ ಲೆಕ್ಕ ಪತ್ರ ಸಮಿತಿಯ ಸದಸ್ಯನಾಗಿ ನನಗೆ ರಾಜೇಂದ್ರ ಕಠಿಯಾರ ಅವಮಾನಿಸಿದ್ದಾರೆ. ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯ ಅಧ್ಯಕ್ಷರಾದ ಶಾಸಕ ಸಿ.ಸಿ. ಪಾಟೀಲ ಇದ್ದ ಸಭೆಯಲ್ಲಿ ಹಗುರುವಾಗಿ ಮಾತನಾಡಿರುವ ಅವರು, ನನಗೆ ಮಾತ್ರವಲ್ಲದೇ ಇನ್ನೂ ಅನೇಕ ಶಾಸಕರ ಜೊತೆಗೆ ಸಹ ಇದೇ ರೀತಿಯಾಗಿ ವರ್ತಿಸಿ, ದುರಹಂಕಾರ ತೋರುತ್ತಿದ್ದಾರೆ. ಕೂಡಲೇ ಅವರನ್ನು ಅಮಾನತ್ತು ಮಾಡಬೇಕೆಂದು ಸುಮಾರು 60 ಜನ ಶಾಸಕರು ಸಹಿ ಮಾಡಿದ್ದು, ಅವರ ವಿರುದ್ಧದ ಹಕ್ಕುಚ್ಯುತಿಗೆ ಬೆಂಬಲ ಸೂಚಿಸಿದ್ದಾರೆ. ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಅದಕ್ಕೆ ಬಿಜೆಪಿಯ ಶಾಸಕ ಸಿ.ಸಿ. ಪಾಟೀಲ ಕೂಡ ಸಾತ್ ನೀಡಿದ್ದು, ರಾಜೇಂದ್ರ ಕಠಿಯಾರ ಅವರ ವರ್ತನೆ ಅಸಹಜವಾಗಿದ್ದು, ರಾಜು ಕಾಗೆ ಅವರಿಗೆ ಏರು ಧ್ವನಿಯಲ್ಲಿ ಅವಮಾನಿಸಿದ್ದು ತಪ್ಪು. ಈಗಾಗಲೇ ಸುಮಾರು 60ಕ್ಕೂ ಹೆಚ್ಚು ಶಾಸಕರು ರಾಜೇಂದ್ರ ಕಠಿಯಾರ ವಿರುದ್ಧ ದೂರು ನೀಡಿದ್ದು, ಅವರ ಹಕ್ಕುಚ್ಯುತಿ ಮಂಡಿಸಲು ನಮ್ಮ ಬೆಂಬಲವಿದೆ ಎಂದು ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 