ರಾಜ್ಯಸಭಾ ಚುನಾವಣೆ: ಗುಟ್ಟುಬಿಟ್ಟುಕೊಡದ - ಖರ್ಗೆ
ಬೆಂಗಳೂರು, ಜೂ 2, ರಾಜ್ಯಸಭಾ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ವಿಚಾರದ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ. ಸದಾಶಿವ ನಗರದ ತಮ್ಮ ನಿವಾಸದಲ್ಲಿ ರಾಜ್ಯಸಭೆ ಚುನಾವಣೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸದೆ ನುಣುಚಿಕೊಂಡರು. ಚುನಾವಣೆ ವಿಚಾರದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದರು. ರಾಜ್ಯ ಸಭೆ ಚುನಾವಣೆಯ ಬಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದ ಬಗ್ಗೆ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ನೋಡಿಕೊಳ್ಳುತ್ತಾರೆ. ತಮ್ಮನ್ನು ಅಭ್ಯರ್ಥಿ ಮಾಡುವ ವಿಚಾರದ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.ರಾಜ್ಯ ಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತಂತೆ ರಾಜ್ಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜಕೀಯ ವಿಚಾರಗಳಲ್ಲಿ ಏನೇನು ತೀರ್ಮಾನ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ. ಈ ಕುರಿತು ಪ್ರತಿಕ್ರಿಯೆ ನೀಡಿದರೆ ಸರಿ ಹೋಗುವುದಿಲ್ಲ ಎಂದು ಖರ್ಗೆ ಹೇಳಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 