ರಾಜ್ಯಸಭಾ ಸದಸ್ಯ ಎಂ ಪಿ ವೀರೇಂದ್ರ ಕುಮಾರ್ ವಿಧಿವಶ : ಪ್ರಧಾನಿ, ರಾಹುಲ್ ಸಂತಾಪ
ನವದೆಹಲಿ, ಮೇ 29, ರಾಜ್ಯಸಭಾ ಸದಸ್ಯ ಎಂ ಪಿ ವೀರೇಂದ್ರ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.ಪ್ರಧಾನಿ ಮೋದಿ, “ಎಂ ಪಿ ವೀರೇಂದ್ರ ಕುಮಾರ್ ನಿಧನದಿಂದ ತೀವ್ರ ದುಃಖವಾಗಿದೆ. ಅತ್ಯುತ್ತಮ ಶಾಸಕರು ಹಾಗೂ ಸಂಸದರಾಗಿ ಗುರುತಿಸಿಕೊಂಡಿದ್ದ ಅವರು, ಬಡವರು ಹಾಗೂ ದೀನದಲಿತ ಧ್ವನಿಯಾಗಿದ್ದರು.ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪವಿದೆ. ಓಂ ಶಾಂತಿ” ಎಂದು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ ಮಾತೃಭೂಮಿ ಸಮೂಹದ ಲೇಖಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ ಪಿ ವೀರೇಂದ್ರ ಕುಮಾರ್ ಅವರ ನಿಧನದ ಬಗ್ಗೆ ತಿಳಿದು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಸ್ನೇಹಿತರಿಗೆ ನನ್ನ ಸಂತಾಪ, '' ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 