ನ.1 ರಂದು ಬೆಟಗೇರಿಯಲ್ಲಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ
Rajyotsava celebration in Betageri on November 1st
ಬೆಟಗೇರಿ 30: ಬೆಟಗೇರಿ ರಾಜ್ಯೋತ್ಸವ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆ ಹಾಗೂ ಇಲ್ಲಿಯ ಸಾರ್ವಜನಿಕರ ಆಶ್ರಯದಲ್ಲಿ ಕಳೆದ 28 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತ ಬಂದಿದ್ದು, ಅದರ ಅಂಗವಾಗಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ನವಂಬರ-1 ಶನಿವಾರದಂದು ಅದ್ಧೂರಿಯಾಗಿ ಆಚರಿಸಲಾಗುವುದು.
ಅದರ ಅಂಗವಾಗಿ ಬೆಟಗೇರಿ ಶಾಲಾ ಕಾಲೇಜುಗಳ ಆಕರ್ಷಕ ರೂಪಕಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಬೆಟಗೇರಿಯ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಾಲಾ ಕಾಲೇಜು ಮುಖ್ಯಸ್ಥರು, ಶಿಕ್ಷಕ ಶಿಕ್ಷಕಿಯರು, ಸಿಬ್ಬಂದಿಯವರು ಹಾಗೂ ಸಾರ್ವಜನಿಕರು ಪಾಳ್ಗೊಳ್ಳಲಿರುವರು.
ನವಂಬರ-1 ರಂದು ಮುಂಜಾನೆ ಸರಿಯಾಗಿ 8-30 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲರು, ಕಾರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಬೆಟಗೇರಿಯ ಎಲ್ಲ ನಗರಸಭಾ ಸದಸ್ಯರುಗಳು, ಡಿ.ಡಿ.ಪಿಐ. ಗದಗ, ಗದಗ ಶಹರ ಕ್ಷೇತ್ರಶಿಕ್ಷಣಾಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿರುವರು.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಶಾಲಾ ಕಾಲೇಜದವರು ಪಾಲ್ಗೊಳ್ಳಬೇಕೆಂದು ರಾಜ್ಯೋತ್ಸವ ಸಮಿತಿ ಅಧ್ಯಕ್ಷರಾದ ಗಣೇಶಸಿಂಗ ಬ್ಯಾಳಿ ವಿನಂತಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 