ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆದ ರಾಮನಾಥ್ ಕೋವಿಂದ್
ನವದೆಹಲಿ .23 ಇದೇ ತಿಂಗಳ 12ರಿಂದ ಮಹಾರಾಷ್ಟ್ರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಬೆಳಗ್ಗೆ ಹಿಂಪಡೆದಿದ್ದಾರೆ. ಸಂವಿಧಾನದ 356 ನೇ ವಿಧಿ (2) ರ ಷರತ್ತು (2) ನಡಿ ನೀಡಲ್ಪಟ್ಟ ಅಧಿಕಾರ ಚಲಾಯಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನವೆಂಬರ್ 12 ರಂದು ಹೊರಡಿಸಿದ್ದ ಘೋಷಣೆಯನ್ನು ನವೆಂಬರ್ 23 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವೀಸ್ ಅವರು 19 ನೇ ಮುಖ್ಯಮಂತ್ರಿಯಾಗಿ, ಎನ್ಸಿಪಿ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿ ಆಗಿ ಶನಿವಾರ ಬೆಳಿಗ್ಗೆ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ರಾಜ್ಯಪಾಲ ಬಿ.ಎಸ್. ರಾಜ್ ಭವನದಲ್ಲಿ ಕೋಶಿಯಾರಿ ಬೆಳಗ್ಗೆ 8 ಗಂಟೆಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 