ಯರಗಟ್ಟಿ, 09 : ನಾಡಿನಲ್ಲಿ ಸಂಸ್ಕೃತಿ, ಸಂಪ್ರದಾಯಗಳು ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ದೇವಾಲಯಗಳು, ದೇವರ ಕೆಲಸಗಳನ್ನು ಭಕ್ತಾಧಿಗಳು ಮಾಡುತ್ತಿರಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.
ಪಟ್ಟಣದಲ್ಲಿ ನೂತನವಾಗಿ ನವಿಕರಣಗೊಂಡ ದುರ್ಗಾದೇವಿ ದೇವಾಲಯ ಮತ್ತು ದುರ್ಗಾದೇವಿ ಜಾತ್ರೆ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುರಾತನ ಕಾಲದ ಐತಿಹಾಸಿಕ ದೇವಸ್ಥಾನಗಳು ಜೀರ್ಣೋದ್ಧಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೆವೆ ಆದರೆ ಈಗನ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮರೆತಿದೆ ಎಂದರು.ಈಗಿನ ಯುವ ಪೀಳಿಗೆಯ ಪ್ರತಿಯೊಬ್ಬರೂ ಆಚಾರ-ವಿಚಾರಗಳನ್ನು ತಿಳಿಯಬೇಕು ಹಾಗೂ ಐತಿಹಾಸಿಕ ಇತಿಹಾಸಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ನೂತನ ದೇವಸ್ಥಾನ ವೀಕ್ಷಿಸಿ ಶುಭ ಹಾರೈಸಿದರು.ಇದೇ ವೇಳೆ ಬೆಳ್ಳಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಹೊಮ ಹವನ, ನವಗೃಹ ಪೂಜೆಯನ್ನು ವೈದೀಕರಾದ ರಾಜು ಹಿರೇಮಠ, ಆಕಾಶ ಹಿರೇಮಠ, ವಿಶ್ವನಾಥ ಹಿರೇಮಠ ಇವರಿಂದ ಪೂಜಾ ವಿಧಿ ವಿಧಾನಗಳನ್ನು ನೆಡೆಸಿದ್ದರು.
ಈ ಸಂದರ್ಭಧಲ್ಲಿ ಸಾನಿಧ್ಯವನ್ನು ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು, ದೇವಾಲಯ ಅಭಿವೃದ್ದಿ ಸಮಿತಿಯ ಸುರೇಶ ಭಜಂತ್ರಿ, ರಾಜು ಭಜಂತ್ರಿ, ಕೃಷ್ಣಪ್ಪ ಭಜಂತ್ರಿ, ಮಲ್ಲಿಕಾರ್ಜುನ ಭಜಂತ್ರಿ, ಲಕ್ಷ್ಮಣ ಭಜಂತ್ರಿ, ರುದ್ರ್ಪ ಭಜಂತ್ರಿ, ಕಾಂತು ಭಜಂತ್ರಿ, ಭೀಮಶಿ ಭಜಂತ್ರಿ, ಶಿವು ಭಜಂತ್ರಿ, ಹನುಮಂತ ಭಜಂತ್ರಿ, ಮಹೇಶ ಭಜಂತ್ರಿ, ರಫೀಕ ಡಿ. ಕೆ. ಸೇರಿದಂತೆ ಅನೇಕರು ಭಜಂತ್ರಿ ಸಾಮಾಜದ ಗುರು ಹಿರಿಯರು, ಯುವಕರು ಇದ್ದರು.