ರಾಣೆಬೆನ್ನೂರು ತಾಲೂಕು ತೀವ್ರ ಬರಪೀಡಿತ ಘೋಷಣೆ: ರೈತ ಸಂಘಟನೆಗಳ ಹರ್ಷ
Ranebennur Taluk declared severely drought-hit; farmers' organizations rejoice
ರಾಣೆಬೆನ್ನೂರು, ಸೆ.17: ರೈತ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ನಡೆಸಿದ ನಿರಂತರ ಹೋರಾಟಕ್ಕೆ ಫಲ ಸಿಕ್ಕಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕನ್ನು ರಾಜ್ಯ ಸರ್ಕಾರ ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಿದೆ.
ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ರೈತ ಮುಖಂಡರು ಹಾಗೂ ್ತೈಹ್ಪ್ತೃಹಿಹ್ಪಳ್ತವ್ಠ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ, ಪ್ರತಿಭಟನೆ ನಡೆಸಿದ್ದರು.
ಸೆ.13ರಂದು ಮಾಜಿ ಶಾಸಕ ಅರುಣಕುಮಾರ ಪೂಜಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿ ರಾಣೆಬೆನ್ನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿದ್ದರು.
ಸರ್ಕಾರದ ಘೋಷಣೆಯನ್ನು ಸ್ವಾಗತಿಸಿರುವ ರೈತ ಸಂಘಟನೆಗಳು, ತಾಲೂಕಿನಲ್ಲಿ ಬರದಿಂದ ಉಂಟಾಗಿರುವ ಬೆಳೆಹಾನಿಯನ್ನು ಸಮಗ್ರವಾಗಿ ಪರೀಶೀಲಿಸಿ ರೈತರು ಹಾಗೂ ಕೃಷಿ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿವೆ.
ಈ ಕುರಿತು ಮಾತನಾಡಿದ ಮಾಜಿ ಶಾಸಕ ಅರುಣಕುಮಾರ ಪೂಜಾರ್, “ರಾಣೆಬೆನ್ನೂರು ತಾಲೂಕಿನ ರೈತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. ರೈತರ ಹೋರಾಟಕ್ಕೆ ಫಲ ದೊರೆತಿದೆ. ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮುಂದೆಯೂ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 