ನಾಳೆ ನಗರಕ್ಕೆ ರವಿ ಚನ್ನಣ್ಣವರ
ಲೋಕದರ್ಶನವರದಿ
ಮಹಾಲಿಂಗಪುರ೧೧ : ಸ್ಥಳೀಯ ನ್ಯೂ ಮಿಲೇನಿಯಂ ಶಿಕ್ಷಣ ಸಂಸ್ಥೆಯ ಸಿ. ಕೆ. ಚಿಂಚಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಚಿಂಚಲಿ ಉತ್ಸವ ಕಾರ್ಯಕ್ರಮ ಜ. 13 ರಂದು ಸಂಜೆ 4 ಗಂಟೆಗೆ ಶಾಲಾ ಆವರಣದಲ್ಲಿ ಜರುಗಲಿದೆ.
ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು, ಮುಖ್ಯ ಅತಿಥಿಯಾಗಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ ಆಗಮಿಸಿ ಭವಿಷ್ಯದ ಬುನಾದಿಗೆ ರವಿ ಚನ್ನಣ್ಣವರ ಕನಸುಗಳು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ರಾಯಚೂರು ಜಿಲ್ಲೆಯ ಕವಿತಾಳ ಗ್ರಾಮದ ಪ್ರಗತಿ ಪರ ರೈತ ಮಹಿಳೆ ಕವಿತಾ ಮಿಶ್ರಾ, ಯುವ ನಾಯಕ ಅರುಣ ಕಾರಜೋಳ ಮತ್ತು ವಿಶೇಷ ಸನ್ಮಾನಿತರಾಗಿ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಆಗಮಿಸಲಿದ್ದು , ಸಂಸ್ಥೆಯ ಕಾರ್ಯದಶರ್ಿ ಮಹಾಂತೇಶ ಚಿಂಚಲಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಂದು ನಡೆದ ಪೂರ್ವ ಭಾವಿ ಸಭೆಯ ಸುದ್ದಿ ಗೋಷ್ಠಿಯಲ್ಲಿ ಮುಖ್ಯೋಪಾಧ್ಯಾಯ ಸುರೇಶ ಗೊರಬಾಳ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 