ಓದಿನಿಂದ ಉನ್ನತ ಸಾಧನೆ ಸಾಧ್ಯ
Reading can lead to high achievement.
ಲೋಕದರ್ಶನ ವರದಿ
ಹೂವಿನ ಹಡಗಲಿ 23: ನಿರಂತರ ಓದಿನಿಂದ ಉನ್ನತ ಸಾಧನೆ ಸಾಧ್ಯ ಎಂದು ಕವಿ ರಾಮಪ್ಪ ಕೋಟಿಹಾಳ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಜೆ ಎಸ್ ಎಸ್ ಕಾಲೇಜಿನಲ್ಲಿ ಗುರುವಾರಓದು ಅಭಿಯಾನದಲ್ಲಿ ಕಾಲೇಜಿನ ಭಾಷಾ ಸಂಘ, ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗ ಸಿಂಚನ ಪ್ರಕಾಶನ ಮೇ ಸಾಹಿತ್ಯ ಮೇಳ ಬಳಗದ ಸಹಯೋಗದಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತಸಾವಿತ್ರಿ ಬಾಯಿ ಫುಲೆ ಮತ್ತು ವೀರ ಭಗತ್ ಸಿಂಗ್ ನೂರು ಪುಸ್ತಕಗಳ ಕೊಡುಗೆ ಮತ್ತು ಪುಸ್ತಕ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹೆಚ್ಚು ಹೆಚ್ಚು ಓದಿದಾಗ ಜ್ಞಾನವನ್ನು ಮಕ್ಕಳಿಗೆ ವರ್ಗಾಯಿಸಲು ಅನುಕೂಲ.ಅಂಬೇಡ್ಕರ್ ಗಾಂಧಿ ಬಸವಣ್ಣ ಅಕ್ಕಮಹಾದೇವಿ ಕುವೆಂಪು ತಮ್ಮ ನಡೆ ನುಡಿ ಕೃತಿಗಳಿಂದ ಇಂದಿಗೂ ಸಾಹಿತ್ಯ ಲೋಕದಲ್ಲಿ ಜೀವಂತವಾಗಿದ್ದಾರೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ ಎಚ್ ಪಿ ರಮೇಶ್,ಭಾಷಾ ಸಂಘದ ಸಂಚಾಲಕ ಡಾ ಎಂ ಪಿ ಎಂ ಮಂಜುನಾಥ , ಕ.ಜಾ.ಸ.ಜಿಲ್ಲಾ ಸದಸ್ಯ ಸುರೇಶ , ಪತ್ರಕರ್ತಖಾಜಾ ಹುಸೇನ್ , ಡಾ.ಅಶೋಕ ಈಡಿಗರ, ಕೆ.ನಾಗರಾಜಮಾತನಾಡಿದರು.ಶಿಕ್ಷಕ ವಿದ್ಯಾರ್ಥಿನಿ ಲಲಿತಾ ಮೈಲಾರ ವಿಶ್ವ ಪುಸ್ತಕ ದಿನಾಚರಣೆ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್ ಉಪನ್ಯಾಸಕ ಭೋಜರಾಜ್, ವಿರುಪಾಕ್ಷಪ್ಪ,ಭಾಸ್ಕರ್ ನಂದಿ ಇದ್ದರು.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 