ಓದಿನಿಂದ ಉನ್ನತ ಸಾಧನೆ ಸಾಧ್ಯ
Reading can lead to high achievement.
ಲೋಕದರ್ಶನ ವರದಿ
ಹೂವಿನ ಹಡಗಲಿ 23: ನಿರಂತರ ಓದಿನಿಂದ ಉನ್ನತ ಸಾಧನೆ ಸಾಧ್ಯ ಎಂದು ಕವಿ ರಾಮಪ್ಪ ಕೋಟಿಹಾಳ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಜೆ ಎಸ್ ಎಸ್ ಕಾಲೇಜಿನಲ್ಲಿ ಗುರುವಾರಓದು ಅಭಿಯಾನದಲ್ಲಿ ಕಾಲೇಜಿನ ಭಾಷಾ ಸಂಘ, ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗ ಸಿಂಚನ ಪ್ರಕಾಶನ ಮೇ ಸಾಹಿತ್ಯ ಮೇಳ ಬಳಗದ ಸಹಯೋಗದಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತಸಾವಿತ್ರಿ ಬಾಯಿ ಫುಲೆ ಮತ್ತು ವೀರ ಭಗತ್ ಸಿಂಗ್ ನೂರು ಪುಸ್ತಕಗಳ ಕೊಡುಗೆ ಮತ್ತು ಪುಸ್ತಕ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹೆಚ್ಚು ಹೆಚ್ಚು ಓದಿದಾಗ ಜ್ಞಾನವನ್ನು ಮಕ್ಕಳಿಗೆ ವರ್ಗಾಯಿಸಲು ಅನುಕೂಲ.ಅಂಬೇಡ್ಕರ್ ಗಾಂಧಿ ಬಸವಣ್ಣ ಅಕ್ಕಮಹಾದೇವಿ ಕುವೆಂಪು ತಮ್ಮ ನಡೆ ನುಡಿ ಕೃತಿಗಳಿಂದ ಇಂದಿಗೂ ಸಾಹಿತ್ಯ ಲೋಕದಲ್ಲಿ ಜೀವಂತವಾಗಿದ್ದಾರೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ ಎಚ್ ಪಿ ರಮೇಶ್,ಭಾಷಾ ಸಂಘದ ಸಂಚಾಲಕ ಡಾ ಎಂ ಪಿ ಎಂ ಮಂಜುನಾಥ , ಕ.ಜಾ.ಸ.ಜಿಲ್ಲಾ ಸದಸ್ಯ ಸುರೇಶ , ಪತ್ರಕರ್ತಖಾಜಾ ಹುಸೇನ್ , ಡಾ.ಅಶೋಕ ಈಡಿಗರ, ಕೆ.ನಾಗರಾಜಮಾತನಾಡಿದರು.ಶಿಕ್ಷಕ ವಿದ್ಯಾರ್ಥಿನಿ ಲಲಿತಾ ಮೈಲಾರ ವಿಶ್ವ ಪುಸ್ತಕ ದಿನಾಚರಣೆ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್ ಉಪನ್ಯಾಸಕ ಭೋಜರಾಜ್, ವಿರುಪಾಕ್ಷಪ್ಪ,ಭಾಸ್ಕರ್ ನಂದಿ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 