ಮಕ್ಕಳ ಪ್ರತಿಭೆ ಬಾಲ್ಯದಿಂದಲೇ ಗುರುತಿಸಿ: ಡಾ. ಪವಾರ
ಲೋಕದರ್ಶನವರದಿ
ರಾಣೇಬೆನ್ನೂರು29: ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಜೊತೆಗೆ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಡಾ|| ಎಸ್.ಎಲ್. ಪವಾರ ಹೇಳಿದರು.
ನಗರದ ಸ್ನೇಹಲೋಕ ಶಿಕ್ಷಣ ಸಂಸ್ಥೆಯ ಪರಿಣಿತಿ ವಿದ್ಯಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾಷರ್ಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ಮಕ್ಕಳಿಗೆ ತಿವಿತವಾಗದೆ ಹಿತಕರವಾದ ಅನುಭವವೆನಿಸಬೇಕು. ಪಾಲಕರು ತಮ್ಮ ಮಕ್ಕಳಿಗೆ ಅಂಕ ಗಳಿಕೆಗಿಂತ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಕ್ರಾಂತ ಸಿ.ಎ. ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಸದಸ್ಯರು, ಶಿಕ್ಷಕ ವರ್ಗ ಉಪಸ್ಥಿತರಿದ್ದರು. ನಂತರ ನಡೆದ ಶಾಲಾ ಮಕ್ಕಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಮತ್ತು ಪಾಲಕರ ಗಮನ ಸೆಳೆದವು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 