2024-25 ನೇ ಸಾಲಿನ ಹಿಂಗಾರು ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಪ್ರಾರಂಭ
Registration process for fall crop insurance for the year 2024-25 has started
ಯರಗಟ್ಟಿ 29: ಸವದತ್ತಿ ಹಾಗೂ ಯರಗಟ್ಟಿ ತಾಲೂಕಿನಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಗೊಲಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳಲು ಮುಸುಕಿನ ಜೋಳ (ನೀರಾವರಿ), ಗೋಧಿ (ನೀರಾವರಿ) ಹಾಗೂ ಕಡಲೆ (ಮಳೆ ಆಶ್ರಿತ ಹಾಗೂ ನೀರಾವರಿ) ಬೆಳೇಗಳಿಗೆ ಡಿಸೆಂಬರ್ 16 ಕೊನೆಯ ದಿನಾಂಕ ಹಾಗೂ ಇನ್ನೂಳಿದ ಹಿಂಗಾರು ಬೆಳೆಗಳಿಗೆ ನವೆಂಬರ್ 30, 2024 ಕೊನೆಯ ದಿನವಾಗಿರುತ್ತದೆ. ಬೇಸಿಗೆ ಹಂಗಾಮಿಗೆ ಶೇಂಗಾ (ನೀರಾವರಿ) ಹಾಗೂ ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ 2025 ರ ಫೆಬ್ರುವರಿ.28 ರೊಳಗಾಗಿ ಬೆಳೆ ವಿಮೆ ಮಾಡಿಸಬಹುದು.
ಮಾಹಿತಿಗಾಗಿ ಸಮೀಪದ ರೈತ ಸಂಫರ್ಕ ಕೇಂದ್ರದ ಅಧಿಕಾರಿಗಳು, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕಂದಾಯ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು, ಸವದತ್ತಿ ಶಿವಪ್ರಕಾಶ ವಿ. ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 