ಜಮ್ಮುವಿನಲ್ಲಿ ಧಾರ್ಮಿಕ ಗುರುಪೂರಬ್ ಆಚರಣೆ
ಜಮ್ಮು, ನ 12 : ಜಮ್ಮು ಕಾಶ್ಮೀರದ ಚಳಿಗಾಲದ ರಾಜಧಾನಿ ಜಮ್ಮುವಿನಲ್ಲಿ ಸಿಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ದೇವ್ ಜೀ ಅವರ 550ನೇ ಜನ್ಮ ದಿನಾಚರಣೆ ಅಂಗವಾಗಿ ಗುರುಪೂರಬ್ ಅನ್ನು ಧಾರ್ಮಿಕ ವಿಧಿವಿಧಾನ ಮತ್ತು ಭಕ್ತಿಯೊಂದಿಗೆ ಆಚರಿಸಲಾಯಿತು. ಸಿಖ್ ಧರ್ಮದ ಸಮುದಾಯದ ಮಹಿಳೆಯರು, ಮಕ್ಕಳು ಮತ್ತಿತರರು ಬಣ್ಣ ಬಣ್ಣದ ಬಟ್ಟೆ ಧರಿಸಿ ಮುಂಜಾನೆಯೇ ಗುರುದ್ವಾರಗಳಿಗೆ ಭೇಟಿ ನೀಡಿ ವಿಶೇಷ ಪಾರ್ಥನೆ ಸಲ್ಲಿಸಿದರು. ನಗರದ ಹೃದಯಭಾಗದಲ್ಲಿರುವ ಚಾಂದ್ ನಗರದಲ್ಲಿನ ಗುರುನಾನಕ್ ಗುರುದ್ವಾರದಲ್ಲಿ ವಿಜೃಂಭಣೆಯ ಆಚರಣೆ ಆಯೋಜಿಸಲಾಗಿತ್ತು. ಸಾವಿರಾರು ಸಿಖ್ಖರು ಆಚರಣೆಯಲ್ಲಿ ಪಾಲ್ಗೊಂಡರು. ಭಕ್ತರಿಗಾಗಿ ವಿಶೇಷ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮಿ ಜನರಿಗೆ ಗುರುನಾನಕ್ ಜಯಂತಿಯ ಶುಭಾಷಯ ತಿಳಿಸಿದ್ದಾರೆ. ಶಾಂತಿ, ಸಹೋದರತೆಯನ್ನು ಸಾರುವ ಈ ಹಬ್ಬ ಸಮಾಜಕ್ಕೆ ಸಮೃದ್ಧಿಯನ್ನು ತರಲಿ. ಗುರು ನಾನಕ್ ಅವರ ಸಂದೇಶಗಳು ಮುಂದಿನ ಪೀಳಿಗೆಗಳಿಗೆ ಪ್ರೇರಣೆಯಾಗಲಿ ಎಂದಿದ್ದಾರೆ. ಈ ಸಂದರ್ಭದಲ್ಲಿ ಗುರುನಾನಕ್ ಅವರ ಕೀರ್ತನೆಗಳನ್ನು ಹಾಡಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 