ಕಾರಹುಣ್ಣಿಮೆ ಅಂಗವಾಗಿ ಹುಲಿಗೆಮ್ಮ ಸನ್ನಿಧಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು
Religious programs at Huligemma Sannidhana on the occasion of Karahunnime
ಕಂಪ್ಲಿ 11: ಪಟ್ಟಣದ 22ನೇ ವಾರ್ಡಿನ ವಾಲ್ಮೀಕಿ ನಗರದಲ್ಲಿರುವ ಭಕ್ತರ ಆರಾಧ್ಯ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಕಾರಹುಣ್ಣಿಮೆ ಅಂಗವಾಗಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧಾಭಕ್ತಿಯಿಂದ ಬುಧವಾರ ಜರುಗಿದವು.
ಇಲ್ಲಿನ ದೇವಸ್ಥಾನದ ಸನ್ನಿಧಾನದಲ್ಲಿ ಪೂಜಾರಿಗಳಾದ ಎರೆ್ರಮ್ಮ, ರಾಮಾಂಜಿನೆಮ್ಮ ಇವರ ನೇತೃತ್ವದಲ್ಲಿ ಹುಲಿಗೆಮ್ಮ ದೇವಿಗೆ ಎಲೆಚೆಟ್ಟು ಏರಿಸಿರುವುದು, ಹೂವಿನ ಅಲಂಕಾರ, ಮಹಾಮಂಗಳಾರತಿ, ಜೋಗ್ ಪಂಥಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಸ್ರವಾಗಿ ನೆರವೇರಿದವು.
ಸಾಕಷ್ಟು ಭಕ್ತರು ದೇವಿ ಸನ್ನಿಧಾನಕ್ಕೆ ಭೇಟಿ ನೀಡಿ, ಕಾಯಿ, ಕರ್ೂರ ಅರ್ಿಸಿ, ದರ್ಶನ ಪಡೆದರು. ನಂತರ ಅನ್ನಸಂತಾರೆ್ಣ ಜರುಗಿತು. ಮಂಗಳವಾರದಂದು ಕಂಪ್ಲಿ-ಕೋಟೆಯಿಂದ ವಾಲ್ಮೀಕಿ ನಗರದ ದೇವಸ್ಥಾನದವರೆಗೆ ದೇವಿಯ ಕುಂಭಾ ಮೆರವಣಿಗೆ ನಡೆಸಲಾಯಿತು.
ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕಳಸ ಹಾಗೂ ಮಂಗಳವಾದ್ಯ ಪಾಲ್ಗೊಂಡಿದ್ದವು. ರಾತ್ರಿ ಭಜನೆ ಜರುಗಿತು.
ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ಹೊನ್ನೂರಸ್ವಾಮಿ, ಗೋವಿಂದ, ಅಂಜಿನಿ, ಈ.ಹೊನ್ನೂರಸ್ವಾಮಿ, ಓಬಳೇಶ, ಶೀನಪ್ಪ, ರಾಮಾಂಜಿನಿ, ಪಿ.ವಿರೇಶ ಸೇರಿದಂತೆ ವಾಲ್ಮೀಕಿ ನಗರ ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 