ಸಾಲ ಮರುಪಾವತಿಸಿ ಬ್ಯಾಂಕ್ ಬೆಳವಣಿಗೆಗೆ ಕೈಜೋಡಿಸಿ: ಕುಲಗುಡೆ
Repay loans and contribute to bank growth: Kulgude
ಲೋಕದರ್ಶನ ವರದಿ
ಸಾಲ ಮರುಪಾವತಿಸಿ ಬ್ಯಾಂಕ್ ಬೆಳವಣಿಗೆಗೆ ಕೈಜೋಡಿಸಿ: ಕುಲಗುಡೆ
ರಾಯಬಾಗ 21: ಬಿಡಿಸಿಸಿ ಬ್ಯಾಂಕ್ದಿಂದ ಸಾಲ ಪಡೆದ ರೈತರು ಮತ್ತು ಗ್ರಾಹಕರು ನಿಗದಿತ ಸಮಯದಲ್ಲಿ ಸಾಲ ಮರುಪಾವತಿ ಮಾಡಿ, ಬ್ಯಾಂಕ್ ಬೆಳವಣಿಗೆಗೆ ಕೈಜೋಡಿಸಬೇಕೆಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಬ ಕುಲಗುಡೆ ಹೇಳಿದರು.
ಬುಧವಾರ ಪಟ್ಟಣದ ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಮಾವಿನಹೊಂಡ ರೇವಣಸಿದ್ದೇಶ್ವರ ಪಿಕೆಪಿಎಸ್ನ 116 ರೈತರಿಗೆ 62 ಲಕ್ಷ ರೂ. ಬೆಳೆ ಸಾಲ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ತಮ್ಮ ಕಬ್ಬಿನ ಬಿಲ್ ಬಿಡಿಸಿಸಿ ಬ್ಯಾಂಕ್ಗೆ ಜಮೆ ಮಾಡುವಂತೆ ನೋಡಿಕೊಳ್ಳಬೇಕು. ಪಿಕೆಪಿಎಸ್ದಿಂದ ಟ್ರ್ಯಾಕ್ಟರ್ ಸಾಲ ನೀಡಲಾಗುತ್ತಿದೆ ಎಂದರು. ಶೀಘ್ರದಲ್ಲಿ ರಾಯಬಾಗ ತಾಲೂಕಿನ ನಿಪನಾಳ ಮತ್ತು ನಸಲಾಪೂರ ಗ್ರಾಮದಲ್ಲಿ ಬ್ಯಾಂಕ್ ಶಾಖೆಗಳು ಪ್ರಾರಂಭಗೊಳ್ಳಲಿವೆ ಎಂದು ತಿಳಿಸಿದರು.
ತಾಲೂಕಾ ನಿಯಂತ್ರಣಾಧಿಕಾರಿ ಎಸ್.ಬಿ.ಪಾಟೀಲ, ಶಾಖೆ ವ್ಯವಸ್ಥಾಪಕ ಬಿ.ಪಿ.ರಾಯಣ್ಣವರ, ಬಿಐಗಳಾದ ಮಂಜುನಾಥ ಜಂಬಗಿ, ಸುಧೀರ ನಂದಗಾಂವ, ಚಿದಾನಂದ ಬನಶಂಕರಿ, ಮಾವಿನಹೊಂಡ ರೇವಣಸಿದ್ದೇಶ್ವರ ಪಿಕೆಪಿಎಸ್ ಅಧ್ಯಕ್ಷ ವಿ.ಎಸ್.ಪೂಜಾರಿ, ಮಹೇಶ ಕೊರವಿ, ಮಹಾದೇವ ಲಕ್ಷ್ಮೇಶ್ವರ, ಚಂದ್ರಕಾಂತ ದೇಸಾಯಿ, ರೇವಪ್ಪ ಪೂಜಾರಿ, ಕಲ್ಲಪ್ಪ ಕಗ್ಗೂಡೆ, ಮಹಾದೇವ ಸಾರಾಪೂರೆ, ಮಲ್ಲಿಕಾರ್ಜುನ ಜಿರಲೆ, ವಿನೋದ ಪೂಜಾರಿ, ಅಲಗೊಂಡ ತಟ್ಟಿಮನಿ, ಮಹಾಂತೇಶ ಬೆಳಕೂಡೆ, ಮಹಾದೇವ ನಾಯಿಕ ಸೇರಿ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 