ಗಣರಾಜ್ಯೋತ್ಸವ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ
Republic Day and Ambigara Chowdayya Jayanti Preparatory Meeting
ಮುಂಡಗೋಡ 10: ತಾಲೂಕಾ ಆಡಳಿತದ ವತಿಯಿಂದ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ತಾಲೂಕಾ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಗೆ ತಾಲೂಕಾ ದಂಡಾಧಿಕಾರಿ ಶಂಕರ ಗೌಡಿ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ಗಣ್ಯರಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಉಳಿದ ಗಣ್ಯರು, ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ವೇದಿಕೆಯ ಮುಂಭಾಗದಲ್ಲಿ ಸೂಕ್ತ ಆಸನ ವ್ಯವಸ್ಥೆ ಮಾಡಲಾಗುವುದು ಎಂದರು.ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಇಒ ಟಿ.ವೈ. ದಾಸನಕೊಪ್ಪ, ಶಿರಸ್ತೇದಾರ ಜಿ.ಬಿ. ಭಟ್ಟ, ಬಿಆರಿ್ಸ ರಾಘವೇಂದ್ರ ಗಿರಡ್ಡಿ, ರಾಘವೇಂದ್ರ ಕರೂರ ಸೇರಿದಂತೆ ಲೋಕೋಪಯೋಗಿ, ಚಿಕ್ಕ ನೀರಾವರಿ ಹಾಗೂ ಸಿಡಿಪಿಒ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 