ಜನವರಿ 26ರಂದು ಗಣರಾಜ್ಯೋತ್ಸವ; ಅಚ್ಚುಕಟ್ಟಾಗಿ ಆಚರಣೆಗೆ ಕ್ರಮವಹಿಸಲು ಸೂಚನೆ

ವಿಜಯನಗರ(ಹೊಸಪೇಟೆ): ವಿಜಯನಗರ ಜಿಲ್ಲಾಡಳಿತದಿಂದಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರಿ​‍್ಡಸಲಾಗಿದ್ದು ಯಾವುದೇ ಲೋಪವಾಗದಂತೆ ಆಚರಣೆಗೆ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.  

 ಅವರು ಜನವರಿ 9 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಗಣರಾಜ್ಯೋತ್ಸವ ಕಾರ್ಯಕ್ರಮವು ಶಿಷ್ಟಾಚಾರದಂತೆ ನಡೆಯಲಿದ್ದು ಜ.26 ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಪೊಲೀಸ್, ಎನ್‌.ಸಿ.ಸಿ, ಸ್ಕೌಟ್ಸ್‌ ಅಂಡ್ ಗೈಡ್ ಸೇರಿದಂತೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು ಪೊಲೀಸ್ ಇಲಾಖೆಯಿಂದ ಪಥಸಂಚಲನಕ್ಕೆ ಸಿದ್ದತೆ ಕೈಗೊಳ್ಳಲು ತಿಳಿಸಿದರು. 

ವೇದಿಕೆ ಸಿದ್ದತೆ; ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಅಗತ್ಯವಿರುವ ಶಾಮಿಯಾನ ಸೇರಿದಂತೆ ವೇದಿಕೆ, ಆಸನದ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲು ಮತ್ತು ಮೈದಾನದಲ್ಲಿ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಮೈದಾನದಲ್ಲಿ ನೀರನ್ನು ಸಿಂಪರಣೆ ಮಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಲು ತಿಳಿಸಿದರು.  

ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ;ಶಾಲಾ ಮಕ್ಕಳಿಂದ ದೇಶಭಕ್ತಿ ಮೂಡಿಸುವ ಆಕರ್ಷಕವಾದ ನೃತ್ಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರಿ​‍್ಡಸಲು ಇದಕ್ಕೆ ಬೇಕಾದ ತಾಲೀಮು ಮುಂಚಿತವಾಗಿ ಮಾಡಿಕೊಳ್ಳಲು ತಿಳಿಸಿ ಪ್ರತಿ ಕಾರ್ಯಕ್ರಮದಲ್ಲಿ ಕನಿಷ್ಠ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವಂತೆ ನೋಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.  

ದೀಪಾಲಂಕಾರ; ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಹೊಸಪೇಟೆ ನಗರದ ವಿವಿಧ ವೃತ್ತಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಲು ನಗರಸಭೆಯವರಿಗೆ ತಿಳಿಸಿ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲು ಜೆಸ್ಕಾಂ ಇಂಜಿನಿಯರ್‌ಗೆ ತಿಳಿಸಿದರು. 

ಸಭೆಗೆ ಬಾರದ ಅಧಿಕಾರಿಗಳು, ನೋಟೀಸ್ ನೀಡಲು ಸೂಚನೆ; ಪ್ರಮುಖ ರಾಷ್ಟ್ರೀಯ ಹಬ್ಬಗಣರಾಜ್ಯೋತ್ಸವದ ಪೂರ್ವ ಸಿದ್ದತಾ ಸಭೆಗೆ ಪ್ರಮುಖ ಇಲಾಖೆ ಅಧಿಕಾರಿಗಳಾದ ಲೋಕೋಪಯೋಗಿ, ಪಿಆರ್‌ಇಡಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ನಿಗಧಿತ ಸಮಯಕ್ಕಿಂತ ಒಂದ ಗಂಟೆ ತಡವಾದರೂ ಸಹ ಸಭೆಗೆ ಬಾರದಿರುವ ಬಗ್ಗೆ ಜಿಲ್ಲಾಧಿಕಾರಿಯವರು ಬೇಷರ ವ್ಯಕ್ತಪಡಿಸಿ, ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದರು. 

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್, ಸಹಾಯಕ ಆಯುಕ್ತರಾದ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.