ಸಾಮಾಜಿಕ ಕಾರ್ಯಕರ್ತನಿಗೆ ಜೀವ ಬೆದರಿಕೆ ರಕ್ಷಣೆಗೆ ಮನವಿ
ಲೋಕದರ್ಶನ ವರದಿ
ಮುಂಡಗೋಡ 4: ನಂದಿಕಟ್ಟಾ ಗ್ರಾಮದ ಸಾಮಾಜಿಕ ಕಾರ್ಯಕರ್ತನೊಬ್ಬನಿಗೆ ಜೀವ ಬೆದರಿಕೆಯಿದ್ದು ರಕ್ಷಣೆ ನೀಡುವಂತೆ ಜಿಲ್ಲಾ ವರಿಷ್ಠಧಿಕಾರಿಗೆ ಮತ್ತು ತಹಶೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ನಂದಿಕಟ್ಟಾ ಗ್ರಾಮದ ಬಸವರಾಜ ಲೋಹಾರ ಎಂಬಾತನೇ ಸಾಮಜಿಕ ಕಾರ್ಯಕರ್ತನಾಗಿದ್ದು ತಾಲೂಕಿನ ನಂದಿಕಟ್ಟಾ ಮತ್ತು ಸುತ್ತು ಮುತ್ತಲಿನ ಬಡವರಿಗೆ, ವಿಕಲಚೇತನರಿಗೆ, ವಿದ್ಯಾಥರ್ಿಗಳಿಗೆ, ಮಹಿಳೆಯರಿಗೆ, ವೃದ್ಧರಿಗೆ, ವಿಧವೆಯರ ಮತ್ತು ರೈತರ ಪರವಾದ ಏಳಿಗೆಗೆ ಶ್ರಮಿಸುತ್ತಿದ್ದೇನೆ.
ಆದರೆ ನಂದಿಕಟ್ಟಾ ಗ್ರಾಮದ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇವರ ಮೂಲ ವಿರೋದಕ್ಕೆ ಕಾರಣ ಆಸ್ತಿ ಜಮೀನುಗಳಾಗಿದ್ದು ಇವರಿಗೆ ಇಲ್ಲಿನ ಕೆಳ ದಜರ್ೆಯ ಅಧಿಕಾರಿಗಳು ಅಕ್ರಮ ಅವ್ಯವಾಹರಗಳಲ್ಲಿ ಶಾಮೀಲಾಗಿದ್ದಾರೆ. ಇದರ ವಿರುದ್ಧ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧವೆ ಅಪಪ್ರಚಾರ ಮಾಡುತ್ತಿದ್ದಾರೆ. ಮತ್ತು ಇದೆ ಗ್ರಾಮದ ಕೆಲವರಿಂದ ಜಾತಿ ಹೆಸರಿನಲ್ಲಿ ನನ್ನ ವಿರುದ್ದ ಸುಳ್ಳು ದೂರು ನೀಡಿ ಕಾನೂನನ್ನು ದುರೂಪಯೋಗ ಪಡಿಸುವ ಸಾಧ್ಯತೆ ಇದ್ದು ಇವರಿಂದ ಜೀವಕ್ಕೆ ಅಪಾಯ ಇದೆ ಮತ್ತು ರಕ್ಷಣೆ ನೀಡಿ ಸೂಕ್ತ ತನಿಖೆ ನಡೆಸುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 