ಅನರ್ಹರ ಕ್ಷೇತ್ರಗಳಿಗೆ ಮರುಚುನಾವಣೆ ನಡೆಸುವಂತೆ ಮನವಿ
ಬೆಂಗಳೂರು, ಆ 30 ಅನರ್ಹ ಶಾಸಕರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಮರುಚುನಾವಣೆ ಘೋಷಣೆ ಮಾಡುವಂತೆ ಜೆಡಿಎಸ್ನ ಮಾಜಿ ಕೈಗಾರಿಕೋದ್ಯಮಿಗಳ ರಾಜ್ಯ ಘಟಕದ ಅಧ್ಯಕ್ಷ ಟಿ ಆರ್ ಪ್ರಸಾದ್ ಗೌಡ, ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ
ಕಾಂಗ್ರೆಸ್ ನ 14, ಜೆಡಿಎಸ್ನ 3 ಸೇರಿದಂತೆ 17 ಕ್ಷೇತ್ರಗಳ ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿರುವುದಿಲ್ಲ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯ ಉಳಿಸುವ ಸಲುವಾಗಿ ಈ ಕ್ಷೇತ್ರಗಳಿಗೆ ಶೀಘ್ರವೇ ಮರುಚುನಾವಣಾ ದಿನಾಂಕವನ್ನು ಘೋಷಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರಸಾದ್ ಗೌಡ 2018 ರ ಸಾರ್ವತ್ರಿಕ ಚುನಾವಣೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಯುಎನ್ಐ ಕನ್ನಡ ಸುದ್ದಿಸಂಸ್ಥೆ ಜೊತೆ ಪ್ರಸಾದ್ ಗೌಡ ಮಾತನಾಡಿ, ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೂಚನೆಯ ಮೇರೆಗೆ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದಿದ್ದಾರೆ. ಆದರೆ ಇದು ಪಕ್ಷದ ನಿರ್ಧಾರವಲ್ಲ, ಪ್ರಚಾರಕ್ಕಾಗಿ ಪ್ರಸಾದ್ ಗೌಡ ಹೀಗೆ ಮಾಡಿರಬಹುದು ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 