ಕುಷ್ಠರೋಗ ನಿರ್ಮೂಲನೆಗೆ ಸಂಕಲ್ಪ : ಪ್ರಧಾನಿ ಕರೆ
ನವದೆಹಲಿ, ಜುಲೈ 16 (ಯುಎನ್ಐ) ದೇಶದಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡಲು ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವ ಸಮಯ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬಿಜೆಪಿ ಎಲ್ಲ ಚುನಾಯಿತ ಸದಸ್ಯರು ಸಾಮಾಜಿಕ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಅವರು ಮಂಗಳವಾರ ಒತ್ತಾಯಿಸಿದರು. ಕುಷ್ಠರೋಗವನ್ನು ನಿರ್ಮೂಲನೆ ಮಾಡಲು ಬಿಜೆಪಿ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಇಂದು ಸಂಸದರಿಗೆ ಸ್ಪಷ್ಟ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಂತರ ಸುದ್ದಿಗಾರರಿಗೆ ತಿಳಿಸಿದರು. ಕುಷ್ಠರೋಗ ಆಸ್ಪತ್ರೆಯೊಂದನ್ನು 'ಉದ್ಘಾಟಿಸಲು' ಒಮ್ಮೆ ಆಹ್ವಾನಿಸಿದ್ದ ಮಹಾತ್ಮ ಗಾಂಧಿಯವರ ಉದಾಹರಣೆಯನ್ನು ಪ್ರಧಾನಿ ಸ್ಮರಿಸಿದ್ದಾರೆ ಎಂದೂ ಜೋಶಿ ಹೇಳಿದರು. ಭಾರತ, ಕುಷ್ಠರೋಗ ಮುಕ್ತವಾಗಿರಬೇಕು ಎಂಬುದು ಗಾಂಧಿ ಅವರ ಚಿಂತನೆ, ಧ್ಯೇಯವಾಗಿತ್ತು ಎಂದು ಮೋದಿ ತಮ್ಮ ಪಕ್ಷದ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. ಚುನಾಯಿತ ಸಂಸದರು ಸಂಸತ್ತಿನ ಕೆಲಸದ ಹೊರತಾಗಿಯೂ ಹೆಚ್ಚುವರಿಯಾಗಿ ಇದನ್ನು ಮಾಡಬಹುದು ಎಂದು ಅವರು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ . ಸಭೆಯು ದೇಶದ ನೀರಿನ ಬಿಕ್ಕಟ್ಟಿನ ಬಗ್ಗೆಯೂ ಗಮನಹರಿಸಿದೆ, ಶಾಸಕರು "ತಮ್ಮ ಕ್ಷೇತ್ರಗಳಲ್ಲಿನ ಅಧಿಕಾರಿಗಳೊಂದಿಗೆ ಕುಳಿತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು. ಕುಷ್ಟರೋಗದಂತಹ ಇತರೆ ಕಾಯಿಲೆಯನ್ನು ನಿರ್ಮೂಲನೆ ಮಾಡಲು ಕ್ಷೇತ್ರದಲ್ಲಿ ಕೆಲಸ ಮಾಡಲು ಎಲ್ಲರೂ ಸಂಘಟಿತರಾಗಿ ಹೊಸ ಅಭಿಯಾನಕ್ಕೆ ಚುನಾಯಿತ ಪ್ರತಿನಿಧಿಗಳು ಕೈಜೋಡಿಸಿ ಕಂಕಣಬದ್ಧರಾಗಿ ನಿಲ್ಲಬೇಕೆಂದು ಪ್ರಧಾನಿ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 