ಫಲಶ್ರುತಿಲೋಕದರ್ಶನ ವರದಿಗೆ ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ
Respond quickly to Phalashruti Lokdarshan report and carry out temporary repairs
ಲೋಕದರ್ಶನ ವರದಿ
ದಾಂಡೇಲಿ 30: ಮೇ.28 ರಂದು ಸೇತುವೆಯಲ್ಲಿ ಕುಸಿದು ಬಿದ್ದ ಅಡಿಪಾಯದ ಕಲ್ಲುಗಳು, ಜನರ ಸಂಚಾರಕ್ಕೆ ತೊಂದರೆ ಎನ್ನುವ ಶೀರ್ಷಿಕೆಯಡಿ ಲೋಕದರ್ಶನದಲ್ಲಿ ಪ್ರಕಟಗೊಂಡ ವರದಿಗೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ ಪ್ರಾರಂಭಿಸಿದ್ದಾರೆ. ಈ ವರದಿಯಲ್ಲಿ ಕುಳಗಿ ರಸ್ತೆಯಲ್ಲಿರುವ ಕಾಳಿನದಿ ಸೇತುವೆಯ ಕೋಗಿಲಬನ ಭಾಗದ ರಕ್ಷಣಾ ಗೋಡೆ ಕುಸಿಯುವ ಹಂತದಲ್ಲಿದೆ. ಗೋಡೆ ಯಾವ ಕ್ಷಣದಲ್ಲಾದರೂ ಕುಸಿದು ಜನರ ಜೀವಕ್ಕೆ ಅಪಾಯ ತರುವ ಸಾದ್ಯತೆಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು ತಕ್ಷಣ ಸೇತುವೆಯ ರಕ್ಷಣಾ ಗೋಡೆ ಪರೀಶೀಲಿಸಿ ತ್ವರಿತವಾಗಿ ದುರಸ್ತಿ ಕಾರ್ಯವನ್ನು ಆರಂಭಿಸಿದ್ದಾರೆ. ಸೂಪಾ ಡ್ಯಾಮನಿಂದನೀರು ಬಿಡುವದನ್ನು ನಿಲ್ಲಿಸಿರುವದರಿಂದ ನದಿ ನೀರು ಏರುವ ಮುನ್ನ ಈ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 