ಫಲಶ್ರುತಿಲೋಕದರ್ಶನ ವರದಿಗೆ ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ
Respond quickly to Phalashruti Lokdarshan report and carry out temporary repairs
ಲೋಕದರ್ಶನ ವರದಿ
ದಾಂಡೇಲಿ 30: ಮೇ.28 ರಂದು ಸೇತುವೆಯಲ್ಲಿ ಕುಸಿದು ಬಿದ್ದ ಅಡಿಪಾಯದ ಕಲ್ಲುಗಳು, ಜನರ ಸಂಚಾರಕ್ಕೆ ತೊಂದರೆ ಎನ್ನುವ ಶೀರ್ಷಿಕೆಯಡಿ ಲೋಕದರ್ಶನದಲ್ಲಿ ಪ್ರಕಟಗೊಂಡ ವರದಿಗೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ ಪ್ರಾರಂಭಿಸಿದ್ದಾರೆ. ಈ ವರದಿಯಲ್ಲಿ ಕುಳಗಿ ರಸ್ತೆಯಲ್ಲಿರುವ ಕಾಳಿನದಿ ಸೇತುವೆಯ ಕೋಗಿಲಬನ ಭಾಗದ ರಕ್ಷಣಾ ಗೋಡೆ ಕುಸಿಯುವ ಹಂತದಲ್ಲಿದೆ. ಗೋಡೆ ಯಾವ ಕ್ಷಣದಲ್ಲಾದರೂ ಕುಸಿದು ಜನರ ಜೀವಕ್ಕೆ ಅಪಾಯ ತರುವ ಸಾದ್ಯತೆಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು ತಕ್ಷಣ ಸೇತುವೆಯ ರಕ್ಷಣಾ ಗೋಡೆ ಪರೀಶೀಲಿಸಿ ತ್ವರಿತವಾಗಿ ದುರಸ್ತಿ ಕಾರ್ಯವನ್ನು ಆರಂಭಿಸಿದ್ದಾರೆ. ಸೂಪಾ ಡ್ಯಾಮನಿಂದನೀರು ಬಿಡುವದನ್ನು ನಿಲ್ಲಿಸಿರುವದರಿಂದ ನದಿ ನೀರು ಏರುವ ಮುನ್ನ ಈ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡುತ್ತಿದ್ದಾರೆ.
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ 