ಕಾಶ್ಮೀರಿ ಜನರ ಹಕ್ಕುಗಳನ್ನು ಹಿಂದಿರುಗಿಸಿ: ಎಸ್. ಬಾಲನ್
ಬೆಂಗಳೂರು, ಅ.31: ಕಾರ್ಪೋರೇಟ್ ಕಂಪನಿಗಳಿಗೆ ಕಾಶ್ಮೀರದಲ್ಲಿ ಲೂಟಿ ಮಾಡಿಕೊಡಲು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ
ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ಹಿರಿಯ ವಕೀಲ ಹಾಗೂ ಫ್ಯಾಸಿಸ್ಟ್ ವಿರೋಧಿ
ವೇದಿಕೆಯ ಸಂಚಾಲಕ ಎಸ್. ಬಾಲನ್ ಹೇಳಿದ್ದಾರೆ.
ಸೋಷಿಯಲ್ ಡೆಮಾಕ್ರಟಿಕ್
ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬೆಂಗಳೂರಿನಲ್ಲಿ ಗುರುವಾರ ಏರ್ಪಡಿಸಿದ್ದ "ಕಾಶ್ಮೀರದ ಜನರ ಹಕ್ಕುಗಳನ್ನು
ಪುನಸ್ಥಾಪಿಸಿ" ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕಾಶ್ಮೀರ ಜನರನ್ನು ದಮನ ಮಾಡುವ
ಮೂಲಕ ಈ ರಾಜ್ಯಕ್ಕೆ ನೀಡಿದ್ದ ವಿಶೇಷ ಹಕ್ಕನ್ನು ರದ್ದುಪಡಿಸಲಾಗಿದೆ. ಕಾಶ್ಮೀರದಲ್ಲಿ ಗುಜರಾತ್ ಮಾದರಿಯ
ಅಭಿವೃದ್ಧಿ ಮಾಡುವುದಾಗಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ ಗುಜರಾತ್ಗಿಂತ
ಕಾಶ್ಮೀರವೇ ಅಭಿವೃದ್ಧಿ ವಿಷಯದಲ್ಲಿ ಮುಂದಿದೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ
ಫಲವತ್ತಾದ ಭೂಮಿಯನ್ನು ಅಂಬಾನಿ, ಆದಾನಿಯಂತಹ ಕಾರ್ಪೋರೇಟ್ ಕುಳಗಳಿಗೆ ನೀಡುವ ಉದ್ದೇಶವನ್ನು ಸರ್ಕಾರ
ಹೊಂದಿದೆ. ಇದೇ ಉದ್ದೇಶಕ್ಕಾಗಿ ಅಲ್ಲಿಗೆ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದೆ ಎಂದು ಆರೋಪಿಸಿದ
ಅವರು, ಕೂಡಲೇ ಕಾಶ್ಮೀರಿಗಳ ಹಕ್ಕುಗಳನ್ನು ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 