ಕ್ವಾರಂಟೈನ್ ನಿಯಮ ಮತ್ತೆ ಪರಿಷ್ಕರಣೆ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ 7 ದಿನ ಸಾಂಸ್ಥಿಕ, 7 ದಿನ ಹೋಂ ಕ್ವಾರಂಟೈನ್ ಕಡ್ಡಾಯ
ಬೆಂಗಳೂರು, ಜೂ.28: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರನ್ನು ನಿಯಂತ್ರಿಸಲು ನಿಗದಿಪಡಿಸಲಾಗಿದ್ದ ಕ್ವಾರಂಟೈನ್ ಮಾರ್ಗಸೂಚಿಯನ್ನು ಮತ್ತೆ ಪರಿಷ್ಕರಿಸಿದೆ.ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಗೃಹ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವ ವ್ಯಕ್ತಿಗಳಿಗೆ 14 ದಿನಗಳ ಗೃಹ ಕ್ವಾರಂಟೈನ್ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆಕ್ವಾರಂಟೈನ್ ಕಣ್ಗಾವಲನ್ನು ತಾಂತ್ರಿಕತೆ ಹಾಗೂ ಕಣ್ಗಾವಲು ತಂಡ ಹೆಚ್ಚಿಸುವ ಮೂಲಕ ಸದೃಢಗೊಳಿಸಲಾಗಿದೆ. ಈಹಿನ್ನೆಲೆಯಲ್ಲಿ ಪ್ರಸ್ತುತ ಆದೇಶ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆಉಳಿದ ಎಲ್ಲಾ ಷರತ್ತುಗಳು ಹಿಂದಿನ ಆದೇಶದಂತೆ ಮುಂದುವರಿಯಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 