ರಿಷಿ ನಿಧನಕ್ಕೆ ಕ್ರೀಡಾ ಪಟುಗಳ ಕಂಬನಿ
ನವದೆಹಲಿ, ಏ.30, ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರ ರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತ ನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.“ನಿನ್ನೆ ಇರ್ಫಾನ್ ಖಾನ್, ಇಂದು ರಿಷಿ ಕಪೂರ್ ನಿಧನ. ಈ ಸುದ್ದಿ ಕೇಳಲೇ ತುಂಬ ನೋವಾಗುತ್ತಿದೆ. ರಿಷಿ ಅವರ ಆತ್ಮಕ್ಕೆ ಭಗಂವತ ಶಾಂತಿ ನೀಡಲಿ, ಕುಟಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರಿಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ನಾನು ಅವರ ಚಿತ್ರವನ್ನು ನೋಡುತ್ತಲೆ ಬೆಳೆದಿದ್ದೇನೆ” ಎಂದು ಅವರು ರಿಷಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಬಾಕ್ಸರ್ ವಿಜೇಂದ್ರ ಸಿಂಗ್, ಮಾಜಿ ಟೆನಿಸ್ ಆಟಗಾರ ಮಹೇಶ್ ಭೂಪತಿ, ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ಆಟಗಾರ ಸೈನಾ ನೆಹ್ವಾಲ್, ಟರ್ಬನೇಟರ್ ಹರ್ಭಜನ್ ಸಿಂಗ್, ಕುಸ್ತಿ ಪಟುಗಳಾದ ಸಾಕ್ಷಿ ಮಲೀಕ್, ಸುಶೀಲ್ ಕುಮಾರ್, ಗೀತಾ ಪೋಗಟ್ ಅವರು ಸಹ ಸಂತಾಪ ಸೂಚಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 