ನಂದೀಡ್ ನಲ್ಲಿ ರಸ್ತೆ ಅಪಘಾತ : ಇಬ್ಬರ ಸಾವು
ನಂದೀಡ್, ಮೇ 29,ನಂದೀಡ್ - ನಾಗಪುರ ಹೆದ್ದಾರಿಯಲ್ಲಿ ಹದ್ಗೋನ್ ತೆಹ್ಸಿಲ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ.ಉಮರ್ಖೇಡ್ ನಿವಾಸಿಗಳಾದ ಕಾಶೀನಾಥ್ ಭೀಮಾ ರಾಥೋಡ್ (65) ಮತ್ತು ಅವರ ಪತ್ನಿ ಸುಲೋಚನಾ (60) ಮೋಟಾರು ಸೈಕಲ್ ನಲ್ಲಿ ಸುಲೋಚನಾ ಅವರ ಸಹೋದರಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಮಾಮಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಪಾಲಾಸಾ ಗ್ರಾಮದ ಬಳಿ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದ್ದು ಸುಲೋಚನಾ ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಕಾಶೀನಾಥ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಹಡ್ಗಾವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 