ರಸ್ತೆಗಳ ಸುಧಾರಣೆ: ರೈತರ ಬೆಳೆಗಳನ್ನು ಮಾರುಕಟ್ಟೆಗೆ ತ್ವರಿತವಾಗಿ ಸಾಗಿಸಲು ಸಾಧ್ಯ
Road improvements: Farmers' crops can be transported to market quickly
ರಾಯಬಾಗ 2: ಗ್ರಾಮೀಣ ಭಾಗದ ತೋಟಪಟ್ಟಿಗಳ ರಸ್ತೆಗಳನ್ನು ಸುಧಾರಿಸುವುದರಿಂದ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತ್ವರಿತವಾಗಿ ಸಾಗಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಎಮ್.ಐಹೊಳೆಯವರು ಹೇಳಿದರು.
ಮಂಗಳವಾರ ಜಿ.ಪಂ.ಇಲಾಖೆಯಿಂದ ಎಸ್.ಸಿ.ಪಿ.ಟಿ.ಎಸ್.ಪಿ ಯೋಜನೆಯಡಿ ಮಂಜೂರಾದ 40 ಲಕ್ಷ ರೂ. ಅನುದಾನದಲ್ಲಿ ತಾಲೂಕಿನ ನಸಲಾಪುರ ಗ್ರಾಮದ ಮಲ್ಲು ಕೋರೆ ತೋಟದಿಂದ ಮನೋಹರ ಸನದಿ ತೋಟದ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗೂ ಯಡ್ರಾಂವ ಗ್ರಾಮದಲ್ಲಿ 30 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸಿಬಿಕೆಎಸ್ಎಸ್ ಕೆ ನಿರ್ದೇಶಕ ಭರತೇಶ್ ಬನವಣೆ, ನಸಲಾಪುರ ಗ್ರಾ.ಪಂ. ಅಧ್ಯಕ್ಷ ಅರುಣ ನಾಯಕ, ಮಹಾದೇವ ಕಾಂಬಳೆ, ನೇಮಣ್ಣ ಖೋಮಬಾರೆ, ಚೌಗೊಂಡ ಪಾಟೀಲ, ನಿಂಗಪ್ಪ ಕುಂಬಾರ, ರಾಜು ಪರಮಾಜೆ, ಅನೀಲ ಪಾಟೀಲ, ಬಾಳಾಸಾಹೇಬ ಪಾಟೀಲ, ಶಿವಾನಂದ ಕುಂಬಾರ, ಅದಗೌಡ ಪಾಟೀಲ, ಯಡ್ರಾಂವ ಗ್ರಾ.ಪಂ. ಅಧ್ಯಕ್ಷೆ ಅಶ್ವಿನಿ ಧನಗರ, ಅಕ್ಕತಾಯಿ ಐಹೊಳೆ, ಕಲ್ಲಪ್ಪ ನಿಂಗನೂರೆ, ಹಾಲಪ್ಪ ಧನಗರ, ಬಾಲಚಂದ್ರ ದತ್ತವಾಡೆ, ಸುರೇಶ್ ಐಹೊಳೆ, ಅಜಿತ ಸಂಗಮೇಶ್ವರ, ಮುರುಗೇಶ ಮಾಳಿ, ಶ್ರೀಕಾಂತ ಪಡಲಾಳೆ, ಅಭಯಂತರ ಎಸ್.ಎಸ್.ಹೊಸಮನಿ ಸೇರಿ ಅನೇಕರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 