ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಕಾರ್ಯಕ್ರಮ
Road safety awareness program for drivers
ದಾಂಡೇಲಿ 23: ದಾಂಡೇಲಿಯ ನಗರ ಪೋಲಿಸ್ ಠಾಣೆಯ ಆಶ್ರಯದಲ್ಲಿ ಬಸ್ ನಿಲ್ದಾಣದ ಎದುರಿನ ಆಟೋ ನಿಲ್ದಾಣದಲ್ಲಿ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ ಶಿವಾನಂದ ಅಂಬಿಗೇರ ಅವರು ರಿಕ್ಷಾ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರನ್ನುದ್ದೇಶಿಸಿ ಮಾತನಾಡಿ ಜನರ ಜೀವವನ್ನು ಉಳಿಸುವಲ್ಲಿ ಚಾಲಕರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬ ಚಾಲಕ ಸಂಚಾರಿ ನಿಯಮಗಳನ್ನು ಅರಿತಿರಬೇಕು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನಗಳ ದಾಖಲೆಗಳನ್ನು ಸರಿಯಾಗಿ ಇಟ್ಟು ವಿಮಾ ಪತ್ರ ತಪ್ಪದೆಹೊಂದಿರಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ನಗರ ಠಾಣೆಯ ಪಿ.ಎಸ್.ಐ ಅಮೀನ ಅತ್ತಾರ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 