ರೋಜರ್ ಬಿನ್ನಿ ಕೆಎಸ್ಸಿಎ ನೂತನ ಅಧ್ಯಕ್ಷ
ಬೆಂಗಳೂರು, ಅ.3: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಣ ಕ್ಲೀನ್ ಸ್ವೀಪ್ ಮಾಡಿದೆ. ಭಾರತ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ, ಇನ್ನು ಕೆಎಸ್ಸಿಎ ಅಧ್ಯಕ್ಷ. ಇವರು 943 ಮತಗಳನ್ನು ಪಡೆದರೆ, ಪ್ರತಿ ಸ್ಪರ್ಧೆ ಕ್ಯಾ.ಎಂ.ಎಂ.ಹರೀಶ್ 111 ಮತ ಪಡೆದರು. ಉಪಾಧ್ಯಕ್ಷರಾಗಿ ಜೆ.ಅಭಿರಾಮ್ ಆಯ್ಕೆ ಆಗಿದ್ದಾರೆ. ಇವರು 885 ಮತ ಪಡೆದರು. ಜೋಸೆಫ್ ಹೂವಾರ್ 122, ಸಿದ್ದಲಿಂಗ್ ಸ್ವಾಮಿ 37 ಮತ ಪಡೆದರು. ಗೆದ್ದ ಆಡಳಿತಾಧಿಕಾರಿಗಳು: ಸಂತೋಷ್ ಮೆನನ್, ಕಾರ್ಯದರ್ಶಿ ಶವೀರ್ ತರಾಪೊರೆ, ಜಂಟಿ ಕಾರ್ಯದರ್ಶಿ ವಿನಯ್ ಮೃತ್ಯುಂಜಯ್, ಖಜಾಂಚಿ ಶಾಂತಿ ಸ್ವರೂಪ್, ಅಜೀವ ಸದಸ್ಯತ್ವ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 