ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಬೆಂಗಳೂರು, ಡಿ.17 ರೌಡಿಶೀಟರ್ನೋರ್ವನನ್ನು
ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಸಂಪಿಗೆಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ.ಭರತ್
ಅಲಿಯಾಸ್ ಕೋಗಿಲು ಭರತ್ (28) ಕೊಲೆಯಾದ ರೌಡಿಶೀಟರ್. ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗದಲ್ಲಿ
ಭರತ್ ನಿಂತಿದ್ದಾಗ ಬೈಕ್ನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಯಾದ ಭರತ್ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು,
ಈತನ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ
ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ, ದರೋಡೆ, ಬೆದರಿಕೆಯೊಡ್ಡಿರುವ ಪ್ರಕರಣಗಳು ದಾಖಲಾಗಿವೆ.ಹಳೇ
ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 