ದಕ್ಷಿಣ ಕನ್ನಡ ಸೀಲ್ಡೌನ್ ಕುರಿತ ವದಂತಿಗಳು ಆಧಾರ ರಹಿತ- ವಾರ್ತಾ ಇಲಾಖೆ
ಮಂಗಳೂರು, ಏಪ್ರಿಲ್ 10,ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗ ಮುಚ್ಚಲಾಗುವುದು ಎಂಬ ವದಂತಿಗಳು ಆಧಾರ ರಹಿತವಾಗಿದ್ದು, ಅಧಿಕಾರಿಗಳು ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ವಾರ್ತಾ ಇಲಾಖೆ ತಿಳಿಸಿದೆ.‘ಜಿಲ್ಲೆಯಲ್ಲಿ ಈಗಾಗಲೇ ಲಾಕ್ಡೌನ್ ಜಾರಿಯಲ್ಲಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ಸಂಪೂರ್ಣ ಮುಚ್ಚುವ(ಸೀಲ್ಡೌನ್) ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ.’ ಎಂದು ಇಲಾಖೆ ವದಂತಿಗಳನ್ನು ಅಲ್ಲಗೆಳೆದು ತಿಳಿಸಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪಡೆದ ನಂತರವೇ ಈ ವಿಷಯದಲ್ಲಿ ಯಾವುದೇ ಸುದ್ದಿಗಳನ್ನು ಪ್ರಕಟಿಸಬಹುದು. ಆಧಾರರಹಿತ ಸುದ್ದಿಗಳನ್ನು ಪ್ರಕಟಿಸುವುದರಿಂದ ವದಂತಿಗಳು ಜನರ ಮನಸ್ಸಿನಲ್ಲಿ ಗೊಂದಲವನ್ನು ಸೃಷ್ಟಿಸುತ್ತವೆ ಎಂದು ಹೇಳೀರುವ ಇಲಾಖೆ, ಅಧಿಕೃತವಾಗಿ ದೃಢೀಕರಣಗೊಳ್ಳದ ಇಂತಹ ಸುದ್ದಿಗಳನ್ನು ಹರಡದಂತೆ ಜನರಲ್ಲಿ ಮನವಿ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 