ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಎಸ್ ಕೆ ಗಿಂಡೆ, ಆದರ್ಶ ವಿದ್ಯಾರ್ಥಿನಿ ಪ್ರಶಸ್ತಿಗೆ ಸಾಕಿಬಾ ಪೀರಜಾದೆ ಆಯ್ಕೆ
S.K. Ginde selected for district level ideal teacher award, Sakiba Peerzade selected for ideal stude
ಮಹಾಲಿಂಗಪುರ, 19 ; ಸ್ಥಳೀಯ ಶ್ರೀ ಬಸವಾನಂದ ಶಾಲೆಯ ಮುಖ್ಯ ಗುರುಗಳಾದ ಶ್ರೀ ಎಸ್ ಕೆ ಗಿಂಡೆ ಅವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿ ಸಾಕೀಬಾ ಪೀರಜಾದೆ ಜಿಲ್ಲಾ ಮಟ್ಟದ ಆದರ್ಶ ವಿದ್ಯಾರ್ಥಿನಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕ ಬಾಗಲಕೋಟೆ ಇವರು ಸೆ 20ರಂದು ಮು. 10: 30ಕ್ಕೆ ಬಾದಾಮಿಯ ಶ್ರೀ ಬಸವ ಮಂಟಪದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಅನುದಾನಿತ ಶಿಕ್ಷಕರ ಸಮಾವೇಶ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಬಸವಾನಂದ ಬ್ರಹ್ಮ ವಿದ್ಯಾಶ್ರಮ ಟ್ರಸ್ಟಿನ ಆಡಳಿತ ಮಂಡಳಿಯ ಎಲ್ಲ ಸದಸ್ಯರು,ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 