ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’
ಬೆಂಗಳೂರು, ಫೆ 18, ರಮೇಶ್ ಅರವಿಂದ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಶಿವರಾತ್ರಿಯಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ ರಮೇಶ್ ಪತ್ತೇದಾರಿಯಾಗಿ ಅಭಿನಯಿಸಿರುವ ಕಾರಣ ಅವರ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ ಇದು ರಮೇಶ್ ಅಭಿನಯದ 101ನೇ ಚಿತ್ರ ಎಂಬುದು ವಿಶೇಷ ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ ಎನ್ ಹಾಗೂ ಅನೂಪ್ ಗೌಡ ಅವರು ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ‘ದಿ ಕೇಸ್ ಆಫ಼್ ರಣಗಿರಿ‘ ಎಂಬ ಅಡಿಬರಹವಿದೆ ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಛಾಯಾಗ್ರಹಣ, ಶ್ರೀಕಾಂತ್, ಆಕಾಶ್ ಶ್ರೀವತ್ಸ ಅವರ ಸಂಕಲನವಿದೆ. ಅಭಿಜಿತ್ ಹಾಗೂ ಆಕಾಶ್ ಶ್ರೀವತ್ಸ ಚಿತ್ರಕಥೆ ಬರೆದಿದ್ದು, ಹಾಡುಗಳನ್ನು ಜಯಂತ ಕಾಯ್ಕಿಣಿ ರಚಿಸಿದ್ದಾರೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಆರೋಹಿ ನಾರಾಯಣ್ ಮುಂತಾದವರು ‘ಶಿವಾಜಿ ಸುರತ್ಕಲ್‘ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 