ಎಸ್ಕೆಡಿಆರ್ಪಿ ಪರಿಸರ ಮಾಹಿತಿ: ಸಸಿ ನೆಟ್ಟ ಶಿವಯೋಗಿ ಶಿವಚಾರ್ಯರು
ರಾಣೇಬೆನ್ನೂರು 05: ಪರಿಸರ ನಾಶದಿಂದಾಗಿ ಇಂದು ಪ್ರತಿಯೊಂದು ಪ್ರಾಣಿ ಪಕ್ಷಿ ಸೇರಿದಂತೆ ಮಾನವ ಕುಲ ಅನೇಕ ಸಮಸ್ಯಗಳಿಂದ ಬಳಲುವಂತಾಗಿದೆ. ಪರಿಸರ ಸಂರಕ್ಷಿಸದೇ ಹೋದರೆ, ಮತ್ತಷ್ಟು ಅನಾಹುತಗಳನ್ನು ಎದುರಿಸುವಂತಹ ಕಾಲ ತಂದುಕೊಳ್ಳಬೇಕಾಗುತ್ತದೆ ಎಂದು ಶನೈಶ್ಚರ ಮಂದಿರದ ಷ||ಬ್ರ|| ಶಿವಯೋಗಿ ಶಿವಾಚಾರ್ಯ ಶ್ರೀಗಳು ಹೇಳಿದರು.
ನಗರ ಹೊರವಲಯದ ಗಂಗಾಪುರ ರಸ್ತೆಯ ಶನೈಶ್ಚರ ಮಂದಿರ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಬಿ.ಸಿ.ಟ್ರಸ್ಟ್ ಸಂಯುಕ್ತವಾಗಿ ಆಯೋಜಿಸಿದ್ದ, ಪರಿಸರ ಸಂರಕ್ಷಣೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನೆಗೊಂದು ಮಗು ಪರಿಸರಕ್ಕೊಂದು ಸಸಿ ನೆಡಬೇಕಾಗಿದೆ. ಇದರಿಂದ ಸಂಮೃದ್ದಿಯಾಗಿ ಪರಿಸರ ಬೆಳೆಸಲು ಸಾಧ್ಯವಾಗುತ್ತದೆ ಎಂದ ಶ್ರೀಗಳು ಇಂದಿನಿಂದಲೇ ಎಲ್ಲರೂ ಜಾಗೃತರಾಗಿ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಮುಂದಾಗಬೇಕು ಎಂದು ಶ್ರೀಗಳು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ|| ಎಸ್. ಎಸ್. ಬಣಕಾರ, ಕೃಷಿ ಅಧಿಕಾರಿ ನೇಮನಗೌಡ್ರ, ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾಪ್ರತಿನಿಧಿಗಳು, ಪ್ರಗತಿಭಂಧು, ಸ್ವ-ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 