ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು, ಮಾ.26, ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಕೊರೋನಾ ಸೋಂಕು ಹರಡುವ ಭೀತಿಯಿಂದ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ಮುಂದೂಡಿದೆ. ಮುಂದಿನ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ. ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 